ನಂದಿನಿ ಉತ್ಪನ್ನಗಳ ದರ ಏರಿಕೆ ಆದೇಶ ಬೆನ್ನಲ್ಲೇ ಗೊಂದಲಕ್ಕೆ ಕಾರಣವಾಯ್ತು ಸಿಎಂ ಬೊಮ್ಮಾಯಿ ಹೇಳಿಕೆ!

ನಂದಿನ ಹಾಲು ಹಾಗೂ ಮೊಸರಿನ ದರ ಏರಿಕೆ ಮಾಡಿ ಈಗಾಗಲೇ ಕೆಎಂಎಫ್ ಆದೇಶ ಹೊರಡಿಸಿದ್ದು ನಾಳೆಯಿಂದಲೇ ಜಾರಿಗೆ ಬರುತ್ತಿದೆ. ಆದರೆ ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೂ ಇದು ಇದೀಗ ಗೊಂದಲಕ್ಕೆ ಕಾರಣವಾಗಿದೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಕಲಬುರಗಿ: ನಂದಿನ ಹಾಲು ಹಾಗೂ ಮೊಸರಿನ ದರ ಏರಿಕೆ ಮಾಡಿ ಈಗಾಗಲೇ ಕೆಎಂಎಫ್ ಆದೇಶ ಹೊರಡಿಸಿದ್ದು ನಾಳೆಯಿಂದಲೇ ಜಾರಿಗೆ ಬರುತ್ತಿದೆ. ಆದರೆ ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೂ ಇದು ಇದೀಗ ಗೊಂದಲಕ್ಕೆ ಕಾರಣವಾಗಿದೆ. 

ಕಲಬುರಗಿಯ ಸೇಡಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರೈತರಿಗೆ ಅನುಕೂಲವಾಗುವಂತೆ ಹಾಗೂ ಜನರಿಗೆ ಹೊರೆಯಾಗದಂತೆ ಚರ್ಚಿಸಿ ನವೆಂಬರ್ 20ರ ಬಳಿಕ ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 

ಹಾಲು, ಮೊಸರಿನ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಟೋನ್ಡ್ ಹಾಲಿನ ದರ 37 ರಿಂದ 40 ರುಪಾಯಿಗೆ ಹೆಚ್ಚಳ ಮಾಡಲಾಗಿದೆ. ಇನ್ನು ಸ್ಪೆಷನ್ ಹಾಲಿನ ದರ 43 ರಿಂದ 46 ರೂಪಾಯಿಗೆ, ಸಮೃದ್ಧಿ ಹಾಲಿನ ದರ 48 ರಿಂದ 51 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಹೋಮೋಜಿನೈಸ್ಡ್ ಹಾಲು 38 ರೂ. ರಿಂದ 41 ರೂ.ಗೆ ಏರಿಕೆ. ಹೊಮೊಜಿನೈಸ್ಡ್ ಹಸುವಿನ ಹಾಲು 42 ರೂ. ರಿಂದ 45 ರೂ.ಗೆ ಏರಿಕೆ. ಶುಭಂ ಹಾಲು 43 ರೂ. ರಿಂದ 46 ರೂ.ಗೆ ಏರಿಕೆ. ಹೊಮೊಜಿನೈಸ್ಡ್ ಸ್ಟ್ಯಾಂಡಡೈಸ್ಡರ್ ಹಾಲು 44 ರೂ. ರಿಂದ 47 ರೂ.ಗೆ ಏರಿಕೆ. ಸಂತೃಪ್ತಿ ಹಾಲು 50 ರೂ. ರಿಂದ 53 ರೂ.ಗೆ ಏರಿಕೆ. ಡಬಲ್ ಟೋನ್ಡ್ ಹಾಲು 36 ರೂ. ರಿಂದ 39 ರೂ.ಗೆ ಏರಿಕೆಯಾಗಿದೆ.

ಇನ್ನು ಮೊಸರಿನ ದರವನ್ನು ಲೀಟರ್ ಗೆ 45 ರಿಂದ 48 ರೂಪಾಯಿಗೆ ಏರಿಕೆ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com