social_icon

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ ನಿರ್ಧಾರಕನಿಗೆ 40 ಲಕ್ಷ ರೂ ದಂಡ, 4 ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕರ ನಿರ್ಧಾರಕರೊಬ್ಬರನ್ನು (ಅಸೆಸರ್) ದೋಷಿ ಎಂದು ಆದೇಶ ಮಾಡಿರುವ ವಿಶೇಷ ನ್ಯಾಯಾಲಯವು ಅವರಿಗೆ 40 ಲಕ್ಷ ರೂ ದಂಡ ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.

Published: 14th November 2022 10:17 AM  |   Last Updated: 14th November 2022 08:49 PM   |  A+A-


Illegal property case

ಕರ್ನಾಟಕ ಸಿವಿಲ್ ಕೋರ್ಟ್

Posted By : Srinivasamurthy VN
Source : Online Desk

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕರ ನಿರ್ಧಾರಕರೊಬ್ಬರನ್ನು (ಅಸೆಸರ್) ದೋಷಿ ಎಂದು ಆದೇಶ ಮಾಡಿರುವ ವಿಶೇಷ ನ್ಯಾಯಾಲಯವು ಅವರಿಗೆ 40 ಲಕ್ಷ ರೂ ದಂಡ ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್‌ಗಳಾದ 13(1)(ಇ) ಮತ್ತು 13(2) ಅಡಿ ಆರ್‌ ಪ್ರಸನ್ನಕುಮಾರ್‌ ಅವರಿಗೆ ₹40 ಲಕ್ಷ ದಂಡ ಮತ್ತು ನಾಲ್ಕು ವರ್ಷ ಶಿಕ್ಷೆ ವಿಧಿಸಲಾಗಿದೆ. ದಂಡದ ಮೊತ್ತ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ನಾಲ್ಕು ತಿಂಗಳು ಶಿಕ್ಷೆ ಅನುಭವಿಸಬೇಕು ಎಂದು ವಿಶೇಷ ನ್ಯಾಯಾಧೀಶರಾದ ಕೆ ಲಕ್ಷ್ಮಿನಾರಾಯಣ ಭಟ್‌ ಅವರು ಆದೇಶ ಮಾಡಿದ್ದಾರೆ.

ಇದನ್ನೂ ಓದಿ: SC/ST ಕಾಯಿದೆಯಲ್ಲಿ ಡಿಸಿ ವಕೀಲರ ನೇಮಿಸಬಹುದು: ಕರ್ನಾಟಕ ಹೈಕೋರ್ಟ್

ಪ್ರಕರಣದ ಹಿನ್ನೆಲೆ: 
1994ರ ಅಕ್ಟೋಬರ್‌ 20ರಂದು ಪ್ರಸನ್ನಕುಮಾರ್‌ ಅವರು ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಯ ಕಚೇರಿಯಲ್ಲಿ ಮೌಲ್ಯ ನಿರ್ಧಾರ ಅಧಿಕಾರಿಯಾಗಿ (ಅಸಸರ್‌) ನೇಮಕವಾಗಿದ್ದರು. ಅಕ್ರಮ ಆಸ್ತಿ ಗಳಿಕೆ ಮಾಹಿತಿ ಆಧರಿಸಿ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿ, 2013ರ ಡಿಸೆಂಬರ್‌ 12ರಂದು ಅವರ ಮನೆಯ ಮೇಲೆ ದಾಳಿ ನಡೆಸಿದ್ದರು. 1998ರ ಅಕ್ಟೋಬರ್‌ 21ರಿಂದ 2013 ಡಿಸೆಂಬರ್‌ 20ರ ನಡುವೆ ಆರೋಪಿಯು ಅಕ್ರಮವಾಗಿ ₹26.39 ಲಕ್ಷ (ಶೇ 31.71) ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಆರೋಪಿಯ ವಿರುದ್ಧ ಆರೋಪ ಪಟ್ಟಿ ದಾಖಲಿಸಿತ್ತು.

ಇದನ್ನೂ ಓದಿ: 'ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ' ಎಂದು ಮುಂದಿನ ವರ್ಷ ದೊಡ್ಡ ಮಟ್ಟದಲ್ಲಿ ಆಚರಿಸಲು ಸರ್ಕಾರ ಯೋಜನೆ

ಪರಿಶೀಲನಾ ಅವಧಿಯಲ್ಲಿ ಆರೋಪಿಯ ಬಳಿ ಸ್ಥಿರಚರಾಸ್ತಿ 62,58,724 ರೂ ಇದ್ದು, ಇದೇ ಅವಧಿಯಲ್ಲಿ 39,52,727 ರೂ ವೆಚ್ಚ ಮಾಡಲಾಗಿದೆ. ಒಟ್ಟು ಆಸ್ತಿ ಮತ್ತು ವೆಚ್ಚವು 1,02,11,451 ರೂ ಆಗಿದೆ. ಪರಿಶೀಲನಾ ಅವಧಿಯಲ್ಲಿ ಆರೋಪಿಯು ಗಳಿಸಿದ ಆದಾಯ 63,15,141 ರೂ, ಅಕ್ರಮ ಆಸ್ತಿ ಗಳಿಕೆ 38,96,310 ರೂ. ಅಂದರೆ ಶೇ. 61.69ರಷ್ಟು ಅಕ್ರಮ ಆಸ್ತಿ ಗಳಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
 


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp