ವೋಟರ್ ಐಡಿ ಅಕ್ರಮ: ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ ಬಿಬಿಎಂಪಿ, ಇಲಾಖಾ ತನಿಖೆಗೆ ಆದೇಶ

ಮತದಾರರ ಮಾಹಿತಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ (ಎಡಿಇಒ) ಸಲ್ಲಿಸಿರುವ ತನಿಖಾ ವರದಿಯ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಮೂವರು ಹೆಚ್ಚುವರಿ ಕಂದಾಯ ಅಧಿಕಾರಿಗಳನ್ನು (ಎಆರ್‌ಒ) ಅಮಾನತುಗೊಳಿಸಿದ್ದಾರೆ ಮತ್ತು ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ (ಎಡಿಇಒ) ಸಲ್ಲಿಸಿರುವ ತನಿಖಾ ವರದಿಯ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಮೂವರು ಹೆಚ್ಚುವರಿ ಕಂದಾಯ ಅಧಿಕಾರಿಗಳನ್ನು (ಎಆರ್‌ಒ) ಅಮಾನತುಗೊಳಿಸಿದ್ದಾರೆ ಮತ್ತು ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆಯಲ್ಲಿ ಭಾಗವಹಿಸುವಿಕೆಯ ಅಡಿಯಲ್ಲಿ ಮತದಾರರ ಮಾಹಿತಿ ಕಳ್ಳತನದ ಕುರಿತು ಚಿಲುಮೆ ಎಂಬ ಎನ್‌ಜಿಒ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಕೇಳಲಾದ ಎಲ್ಲಾ ನಾಲ್ಕು ಸಂಸದೀಯ ವಿಭಾಗಗಳ ನಾಲ್ಕು ಎಡಿಇಒಗಳು ಸೋಮವಾರ ತಮ್ಮ ವರದಿಯನ್ನು ಸಲ್ಲಿಸಿದರು.

ಚಿಕ್ಕಪೇಟೆ ಕ್ಷೇತ್ರದ ಭೀಮಾ ಶಂಕರ್, ಮಹದೇವಪುರದಿಂದ ಚಂದ್ರಶೇಖರ್ ಮತ್ತು ಶಿವಾಜಿನಗರ ಕ್ಷೇತ್ರದ ಸೊಹೈಲ್ ಎಸ್. ಗಿರಿನಾಥ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ.

'ಈ ಮೂವರು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒಎಸ್) ಮತ್ತು ಬೂತ್ ಮಟ್ಟದ ಸಮಿತಿ (ಬಿಎಲ್‌ಸಿ) ಅಧಿಕಾರಿಗಳಾಗಿದ್ದು, ನಕಲಿ ಗುರುತಿನ ಚೀಟಿಯೊಂದಿಗೆ ಚಿಲುಮೆ ಸಂಸ್ಥೆಗೆ ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಇಂದು ಈ ನಿಟ್ಟಿನಲ್ಲಿ ನಾಲ್ಕು ವರದಿಗಳು ನಮ್ಮ ಬಳಿ ಇವೆ ಎಂದು ಗಿರಿನಾಥ್ ತಿಳಿಸಿದ್ದಾರೆ.

ಈ ವರದಿಗಳನ್ನು ಆಧರಿಸಿ ಬಿಬಿಎಂಪಿ ಅಂತಿಮ ವರದಿಯನ್ನು ಸಿದ್ಧಪಡಿಸಲಿದ್ದು, ಅದನ್ನು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಲಿದೆ. ಬಿಎಲ್‌ಒ ಮತ್ತು ಬಿಎಲ್‌ಸಿ ಕಾರ್ಡ್‌ ನೀಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ನವೆಂಬರ್ 17 ರಂದು ತನಿಖೆಗೆ ಆದೇಶಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಸೋಮವಾರ ತಿಳಿಸಿದೆ. ಹಲಸೂರು ಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ನಿರ್ದಿಷ್ಟ ಸಮುದಾಯ/ಧರ್ಮ/ಜಾತಿಗೆ ಸೇರಿದವರ ಹೆಸರನ್ನು ಅಳಿಸಲಾಗುತ್ತಿದೆ ಎಂಬ ಆರೋಪವನ್ನು ಅಧಿಕಾರಿಗಳು ತಳ್ಳಿಹಾಕಿದ್ದಾರೆ. 'ಸತ್ತವರು, ಸ್ಥಳಾಂತರಗೊಂಡವರು ಅಥವಾ ಬಹು ಹೆಸರುಗಳನ್ನು ಹೊಂದಿರುವವರು' ಮುಂತಾದ ಕಾರಣಗಳಿಂದ ಮಾತ್ರ ಹೆಸರುಗಳನ್ನು ಅಳಿಸಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com