ಮತದಾರರ ಮಾಹಿತಿ ಕಳವು ಪ್ರಕರಣ: ಚುನಾವಣಾ ಆಯೋಗಕ್ಕೆ ದೂರು ನೀಡಲು ಡಿಕೆ ಶಿವಕುಮಾರ್ ಮುಂದು

ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರುಗಳನ್ನು ಅಳಿಸಿರುವ ಕುರಿತು ಪ್ರಶ್ನೆ ಎತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಈ ಕುರಿತು ಬುಧವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಔಪಚಾರಿಕವಾಗಿ ದೂರು ಸಲ್ಲಿಸಲು ಮುಂದಾಗಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಬೆಂಗಳೂರು: ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರುಗಳನ್ನು ಅಳಿಸಿರುವ ಕುರಿತು ಪ್ರಶ್ನೆ ಎತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಈ ಕುರಿತು ಬುಧವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಔಪಚಾರಿಕವಾಗಿ ದೂರು ಸಲ್ಲಿಸಲು ಮುಂದಾಗಿದ್ದಾರೆ.

ಈ ಕುರಿತು ಮಾತನಾಡಿರುವ ಡಿಕೆ.ಶಿವಕುಮಾರ್ ಅವರು, "ಮತದಾರರ ಹೆಸರುಗಳನ್ನು ಸೇರಿಸಲು ಅಥವಾ ತೆಗೆದುಹಾಕಲು ಮತದಾರರ ಪಟ್ಟಿಯಿಂದ 'ಫಾರ್ಮ್ 7' ಕಡ್ಡಾಯವಾಗಿದ್ದರೂ, ಯಾವುದೇ ಕಡ್ಡಾಯ ಕಾರ್ಯವಿಧಾನವನ್ನು ಅನುಸರಿಸದೆ 27 ಲಕ್ಷ ಹೆಸರುಗಳನ್ನು ತೆಗೆದುಹಾಕಿರುವುದು ಹೇಗೆ? ಈ ಅರ್ಜಿಗಳಿಗೆ ಸಹಿ ಹಾಕಿ ಅಧಿಕಾರ ನೀಡಿದ ಅಧಿಕಾರಿ ಯಾರು?'' ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಔಪಚಾರಿಕ ದೂರು ದಾಖಲಿಸಲು ಚುನಾವಣಾ ಆಯೋಗದಿಂದ ಬುಧವಾರ ಸಮಯ ಕೋರಿದ್ದೇವೆ ಎಂದು ಕಾಂಗ್ರೆಸ್ ಹಿರಿಯ ನಾಯಕರು ಹೇಳಿದ್ದಾರೆ.

ಈ ವಿಚಾರದಲ್ಲಿ ಸಾಕಷ್ಟು ಕಾನೂನು ಅಂಶಗಳಿದ್ದು, ಅದನ್ನು ಪರಿಹರಿಸಬೇಕಾಗಿದೆ. ಎಲ್ಲಾ 28 ಕ್ಷೇತ್ರ ಚುನಾವಣಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com