ತುಮಕೂರು: ಗ್ರಾಮಾಂತರದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಅವರ ಹತ್ಯೆಗೆ ಸಂಚು ರೂಪಿಸಿದ ಆರೋಪ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ ಮತ್ತು ಇವರ ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು ವಿರುದ್ಧ ಪ್ರಕರಣ ದಾಖಲಾಗಿದೆ.
ತಮ್ಮ ವಿರುದ್ಧದ ಕೊಲೆ ಸಂಚಿನ ಬಗ್ಗೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ಸುರೇಶ್ ಗೌಡ ಅವರು ದೂರು ನೀಡಿದ್ದು, ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ್, ಅಟ್ಟಿಕಾ ಬಾಬು ಸೇರಿಕೊಂಡು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ದೂರು ಹಿನ್ನೆಲೆಯಲ್ಲಿ ಪೊಲೀಸರು, ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ಐಪಿಸಿ ಸೆಕ್ಷನ್ 120ಬಿ, 506, 109, 34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತುಮಕೂರಿನ ಜೆಎಮ್ಎಫ್ಸಿ ನ್ಯಾಯಾಲಯದ ಅನುಮತಿ ಪಡೆದ ಸುರೇಶ್ ಗೌಡ ಅವರು, ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಕೊಲೆ ಮಾಡಲು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್, ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು ಅವರು ರೌಡಿಶಿಟರ್ ಮೂಲಕ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಸುರೇಶ್ ಗೌಡ ಅವರು ಇತ್ತೀಚಿಗೆ ಹೇಳಿಕೆ ನೀಡಿದ್ದರು.
Advertisement