social_icon

ನಾಗರಹೊಳೆಯಲ್ಲಿ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಸಾವು

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನಲ್ಲಿ ಉರುಳಿಗೆ ಸಿಲುಕಿ ಇತ್ತೀಚಿಗೆ ಹತ್ಯೆಯಾದ ಹೆಣ್ಣು ಹುಲಿಯ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಮರಿಯೊಂದು  ಮೃತಪಟ್ಟಿದೆ.

Published: 28th November 2022 02:10 PM  |   Last Updated: 28th November 2022 02:17 PM   |  A+A-


Tiger cubs captured on camera traps placed inside the forest.

ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ಸೆರೆಯಾಗಿರುವ ಹುಲಿ ಮರಿಗಳ ದೃಶ್ಯ.

Posted By : nagaraja
Source : The New Indian Express

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನಲ್ಲಿ ಉರುಳಿಗೆ ಸಿಲುಕಿ ಇತ್ತೀಚಿಗೆ ಹತ್ಯೆಯಾದ ಹೆಣ್ಣು ಹುಲಿಯ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಮರಿಯೊಂದು ಮೃತಪಟ್ಟಿದೆ. ನಾಪತ್ತೆಯಾಗಿದ್ದ ಹುಲಿ ಮರಿಗಳಿಗಾಗಿ ಅರಣ್ಯ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾಗ ತಾರಕ ಅರಣ್ಯದ ವಲಯದ ಅಂತರ ಸಂತೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಗಂಡು ಹುಲಿ ಮರಿಯ ಕಳೇಬರ ಪತ್ತೆಯಾಗಿದೆ. 

ಈ ಮರಿಯ ಕುತ್ತಿಗೆ, ಭುಜದ ಭಾಗದಲ್ಲಿ ಗಾಯದ ಗುರುತುಗಳು ಕಂಡುಬಂದಿದ್ದು, ಮುಂಗಾಲು ಮುರಿದಿದೆ. ಈ ಅರಣ್ಯದಲ್ಲಿ ಪ್ರಬಲ ಗಂಡು ಹುಲಿಯೊಂದಿಗೆ ನಡೆದ ಹೋರಾಟದಲ್ಲಿ ಮರಿ ಹುಲಿ ಸಾವನ್ನಪ್ಪಿರುವ ಸಾಧ್ಯತೆಯಿರುವುದಾಗಿ ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ. ಅದರ ದೇಹದ ಮಾದರಿಗಳನ್ನು ಪರೀಕ್ಷೆಗಾಗಿ ತೆಗೆದುಕೊಂಡ ನಂತರ ಸಂಪ್ರದಾಯದಂತೆ ಕಳೇಬರವನ್ನು ಸುಡಲಾಯಿತು.

ಉಳಿದ ಮರಿಗಳಿ ಪತ್ತೆಗಾಗಿ ಹುಡುಕಾಟ ಮುಂದುವರೆಸಿದ್ದೇವೆ ಎಂದು ನಾಗರಹೊಳೆ ನಿರ್ದೇಶಕ ಹರ್ಷಕುಮಾರ್ ಹೇಳಿದ್ದಾರೆ. ನವೆಂಬರ್ 12 ರಂದು ಹೆಣ್ಣು ಹುಲಿ ಮೃತಪಟ್ಟ ನಂತರ ಮೂರು ಮರಿಗಳು ನಾಪತ್ತೆಯಾಗಿದ್ದವು. ಈ ಮರಿಗಳ ಚಲನ ವಲನ ಕಂಡುಹಿಡಿಯಲು ಅಂತರಸಂತೆ ಅರಣ್ಯ ವಲಯದಲ್ಲಿ ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆ ಕೈಗೊಂಡಿದ್ದರು.

ಇದನ್ನೂ ಓದಿ: ನಾಗರಹೊಳೆಯಲ್ಲಿ ಕಾಣೆಯಾಗಿದ್ದ 3 ಹುಲಿ ಮರಿಗಳು ಪತ್ತೆ: ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ದೃಶ್ಯ ಸೆರೆ

ಅರಣ್ಯಾಧಿಕಾರಿಗಳು 30 ಕ್ಯಾಮೆರಾ ಟ್ರ್ಯಾಪ್‌ಗಳನ್ನು ಹಾಕಿದ್ದರು ಮತ್ತು ಮರಿಗಳನ್ನು ಪತ್ತೆಹಚ್ಚಲು ಎರಡು ಡ್ರೋನ್ ಕ್ಯಾಮೆರಾಗಳನ್ನೂ ಬಳಸಲಾಗಿತ್ತು. ನವೆಂಬರ್ 15 ರಂದು ಜಿಂಕೆಯ ಅರ್ಧ ತಿಂದ ಮೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಿಂಕೆಯ ಮೃತದೇಹದ ಸುತ್ತಲೂ ಕ್ಯಾಮೆರಾಗಳನ್ನು ಹಾಕಲಾಗಿತ್ತು.

ನವೆಂಬರ್ 16 ರಂದು ಅರಣ್ಯಾಧಿಕಾರಿಗಳು ಟ್ರ್ಯಾಪ್ ಕ್ಯಾಮೆರಾಗಳಲ್ಲಿ ಸೆರೆಹಿಡಿಯಲಾದ ಫೋಟೋಗಳು ಮತ್ತು ವೀಡಿಯೊಗಳನ್ನು ವೀಕ್ಷಿಸಲು ಮೆಮೊರಿ ಕಾರ್ಡ್ ತೆಗೆದು ನೋಡಿದಾಗ, ಮೂರು ಮರಿಗಳು ಜಿಂಕೆಯ ಮೃತದೇಹವನ್ನು ತಿನ್ನುತ್ತಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.


Stay up to date on all the latest ರಾಜ್ಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp