ಬೆಂಗಳೂರು: ಮತದಾರರ ಪಟ್ಟಿ ಪರಿಶೀಲಿಸಲು ವಿಶೇಷ ಅಧಿಕಾರಿಗಳ ನೇಮಕ!

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಅಧಿಕಾರಿಗಳನ್ನು ನೇಮಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಅಧಿಕಾರಿಗಳನ್ನು ನೇಮಿಸಿದೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಚಿಕ್ಕಪೇಟೆಗೆ ಡಾ.ಆರ್.ವಿಶಾಲ್, ಮಹದೇವಪುರಕ್ಕೆ ಅಜಯ್ ನಾಗಭೂಷಣ್ ಅವರನ್ನು ಮತದಾರರ ಪಟ್ಟಿ ಪರಿಶೀಲನೆಗೆ ವಿಶೇಷಾಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.

ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ವಿಧಾನಸಭಾ ಕ್ಷೇತ್ರಗಳಲ್ಲಿ ಹೆಸರು ಸೇರ್ಪಡೆ ಮತ್ತು ಅಳಿಸುವಿಕೆಯ ವಿವರಗಳನ್ನು ನೀಡುವಂತೆ ಸೂಚಿಸಲಾಗಿದ್ದು, ಈ ಕ್ಷೇತ್ರಗಳ ಪಟ್ಟಿಯ ವಿಶೇಷ ಪರಿಷ್ಕರಣೆಗಾಗಿ ಆಕ್ಷೇಪಣೆಗಳು ಮತ್ತು ಹಕ್ಕುಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ 24 ರವರೆಗೆ ವಿಸ್ತರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಇದಕ್ಕೂ ಮುನ್ನ ಚುನಾವಣಾ ಆಯೋಗ ಬಿಬಿಎಂಪಿ ಆಡಳಿತದ ವಿಶೇಷ ಆಯುಕ್ತ ಎಸ್.ರಂಗಪ್ಪ ಮತ್ತು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com