ಪ್ರಹ್ಲಾದ್ ಜೋಶಿ ಮಾನನಷ್ಟ ಪ್ರಕರಣ: ಹೋರಾಟಗಾರ ಹಿರೇಮಠ್ ಗೆ ತೀವ್ರ ಹಿನ್ನಡೆ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದಿಂದ ಖುಲಾಸೆಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಪ್ರಹ್ಲಾದ್ ಜೋಷಿ ಮತ್ತು ಎಸ್ ಆರ್ ಹಿರೇಮಠ್
ಪ್ರಹ್ಲಾದ್ ಜೋಷಿ ಮತ್ತು ಎಸ್ ಆರ್ ಹಿರೇಮಠ್

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದಿಂದ ಖುಲಾಸೆಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಧಾರವಾಡದ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯ ಹಿರೇಮಠ್ ಅವರ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಅವರಿಗೆ ಶನಿವಾರ ಭಾರಿ ಹಿನ್ನಡೆಯಾಗಿದೆ. ಎರಡೂ ಕಡೆಯ ವಾದ ಆಲಿಸಿದ ಬಳಿಕ ಪ್ರಕರಣದ ವಿಚಾರಣೆ ಮುಂದುವರಿಸಲು ನ್ಯಾಯಾಲಯ ನಿರ್ಧರಿಸಿತ್ತು.

ನ್ಯಾಯಾಲಯದ ಆದೇಶ ಅನ್ವಯ, 2015 ರಲ್ಲಿ ಹಿರೇಮಠ್ ಅವರು ಕರ್ನಾಟಕ ಜಿಮ್ಖಾನಾ ಮೈದಾನವನ್ನು ಕಿತ್ತುಕೊಂಡ ಆರೋಪ ಹೊರಿಸಿದ್ದು, 2019 ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ತಮ್ಮನ್ನು ಭ್ರಷ್ಟ ರಾಜಕಾರಣಿ ಎಂದು ಕರೆದಿದ್ದರು ಎಂದು ಜೋಶಿ ಆರೋಪಿಸಿದ್ದರು. ಅಲ್ಲದೆ ತಮ್ಮ ವಿರುದ್ಧ ಆಧಾರರಹಿತ ಆರೋಪಗಳನ್ನು ಹೊರಿಸಿದ ನಂತರ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com