ಯಶಸ್ವಿನಿ ಯೋಜನೆ ಪರಿಷ್ಕರಿಸಿ, ಪತ್ರಕರ್ತರನ್ನು ಯೋಜನೆ ವ್ಯಾಪ್ತಿಗೆ ತನ್ನಿ: ಶಿವಾನಂದ ತಗಡೂರು

ರಾಜ್ಯದ ಯಶಸ್ವಿನಿ ಯೋಜನೆ ಸೂಕ್ತವಾಗಿ ಪರಿಷ್ಕೃತವಾಗಿಲ್ಲ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷ ಶಿವಾನಂದ ತಗಡೂರು ಕಟುವಾಗಿ ಟೀಕಿಸಿದ್ದಾರೆ.
ಶಿವಾನಂದ ತಗಡೂರು
ಶಿವಾನಂದ ತಗಡೂರು
Updated on

ಬೆಂಗಳೂರು: ರಾಜ್ಯದ ಯಶಸ್ವಿನಿ ಯೋಜನೆ ಸೂಕ್ತವಾಗಿ ಪರಿಷ್ಕೃತವಾಗಿಲ್ಲ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷ ಶಿವಾನಂದ ತಗಡೂರು ಕಟುವಾಗಿ ಟೀಕಿಸಿದ್ದಾರೆ.

ಈ ಸಂಬಂಧ ಅವರಿಂದು ಟ್ವೀಟ್ ಮಾಡಿದ್ದಾರೆ. ಈ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಪ್ರಧಾನ ಅಂಶದ ಬಗ್ಗೆ ಅವರು ಸರ್ಕಾರದ ಗಮನ ಸೆಳೆದಿದ್ದಾರೆ. “ಪ್ರಧಾನ ಅರ್ಜಿದಾರರು ಮತ್ತು ಆತನ ಕುಟುಂಬದ ಯಾವುದೇ ಸದಸ್ಯನು ಸರ್ಕಾರಿ ನೌಕರನಾಗಿ ಅಥವಾ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ವೇತನ ಪಡೆಯುತ್ತಿದ್ದಲ್ಲಿ ಈ ಯೋಜನೆಗೆ ಅರ್ಹರಿರುವುದಿಲ್ಲ. ಪ್ರಧಾನ ಅರ್ಜಿದಾರರು ಅಥವಾ ಅವನ ಕುಟುಂಬದ ಸದಸ್ಯರು ಯಾವುದೇ ವಿಮಾ ಯೋಜನೆಯಡಿ ಸದಸ್ಯನಾಗಿದ್ದಲ್ಲಿ ಅಂತವರು ಯಶಸ್ವಿನಿ ಯೋಜನೆಯಡಿ ಸದಸ್ಯನಾಗಲು ಅರ್ಹರಿರುವುದಿಲ್ಲ”.

ಹೀಗೆ ಉಲ್ಲೇಖಿಸಿರುವುದರಿಂದ ಅರ್ಹರು ಈ ಯೋಜನೆ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಕೊಟ್ಟಂಗೂ ಆಗಬೇಕು, ಸಿಗದಂಗೂ ಇರಬೇಕು ಎನ್ನುವುದಕ್ಕೆ ಯಶಸ್ವಿನಿ ಯೋಜನೆ ಸೇರ್ಪಡೆ ಆಗುತ್ತಿರುವುದು ತಾಜಾ ಉದಾಹರಣೆ ಎಂದಿದ್ದಾರೆ.

ಸರ್ಕಾರಕ್ಕೆ ಜನಸಾಮಾನ್ಯರ ಆರೋಗ್ಯವೇ ಆದ್ಯತೆ ಆಗಬೇಕು. ಮತ್ತೊಮ್ಮೆ ಯಶಸ್ವಿನಿ ಯೋಜನೆಯನ್ನು ಸಮಗ್ರವಾಗಿ, ಸರಳೀಕರಣಗೊಳಿಸಿ ಪರಿಷ್ಕರಿಸಬೇಕು. ಪತ್ರಕರ್ತರನ್ನು ಯೋಜನೆ ವ್ಯಾಪ್ತಿಗೆ ತರಬೇಕು ಎಂದು ಶಿವಾನಂದ ತಗಡೂರು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com