ಕೆ.ಆರ್. ಪೇಟೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಧೀರ್ಘ ಕಾಲಿಕ ಹಾಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ನಿರಂತರವಾಗಿ ಕೆಲಸವಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮೂಲಭೂತ ಸೌಕರ್ಯಕ್ಕೆ 600 ಕೋಟಿ ರೂ.ಒದಗಿಸಲಾಗಿದೆ. ಧೀರ್ಘಕಾಲಿಕ ಪರಿಹಾರಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದರು.
ನಾಳೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. ಅಲ್ಲಿ ಈ ವಿಚಾರವನ್ನು ವ್ಯಾಪಕವಾಗಿ ಚರ್ಚಿಸಿದ ಬಳಿಕ ಪರಿಹಾರ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
Advertisement
Advertisement