ಹಾಸನಾಂಬ ದೇವಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತ ಹೃದಯಾಘಾತದಿಂದ ಸಾವು!

ಹಾಸನದ ದೇವಸ್ಥಾನದ ಮುಂಭಾಗದಲ್ಲಿ ಹಾಸನಾಂಬ ದೇವಿಯ ಭಕ್ತರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾಸನ: ಹಾಸನದ ದೇವಸ್ಥಾನದ ಮುಂಭಾಗದಲ್ಲಿ ಹಾಸನಾಂಬ ದೇವಿಯ ಭಕ್ತರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರನ್ನು ಚನ್ನರಪಟ್ಟಣ ತಾಲೂಕಿನ ಬೊಮ್ಮನಹಳ್ಳಿಯ 40 ವರ್ಷದ ಗಿರೀಶ್ ಎಂದು ಗುರುತಿಸಲಾಗಿದೆ. ಹಾಸನಾಂಬ ದೇವಸ್ಥಾನಕ್ಕೆ ಪ್ರವೇಶ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ. 

ಪೊಲೀಸರು ಮತ್ತು ಅಲ್ಲಿ ನರೆದಿದ್ದ ಭಕ್ತ ಸಮೂಹ ಗಿರೀಶ್ ಅವರನ್ನು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಹಿಮ್ಸ್) ಸ್ಥಳಾಂತರಿಸಿದರು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. 

ಹಾಸನಾಂಬ ದೇವಸ್ಥಾನದಲ್ಲಿ ಗುರುವಾರ ಅತಿ ಹೆಚ್ಚು ಜನರು ಸೇರಿದ್ದರು. ದೇವಸ್ಥಾನ ಪ್ರವೇಶಿಸಲು ಯತ್ನಿಸಿದ ಭಕ್ತರನ್ನು ತಪ್ಪಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com