ಮೈಸೂರು: ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 7 ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಡಿಎಸ್ಪಿಗಳಾದ ಕೃಷ್ಣಯ್ಯ ಮಾಲ್ತೀಶ್, ಪವನ್ ಕುಮಾರ್, ಎಸ್ಟಿ ಒಡೆಯರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮಡಿಕೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿಡಬ್ಲ್ಯುಡಿ ಇಲಾಖೆ ಇಇ ಡಿ.ನಾಗರಾಜು ಅವರಿಗೆ ಸೇರಿದ ಮೈಸೂರಿನ ಕೆಸಿ ಬಡಾವಣೆ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ ನೀರಾವರಿ ಇಲಾಖೆಯ ಜ್ಯೂನಿಯರ್ ಇಂಜಿನಿಯರ್ ರಫೀಕ್ ರ ಕುಶಾಲನಗರದಲ್ಲಿರುವ ಮನೆಗೂ ಅಧಿಕಾರಿಗಳು ತೆರಳಿ ದಾಖಲೆಗಳ ಪರಿಶೀಲನೆ ನಡೆಸಿದೆ. ಮತ್ತೊಂದು ತಂಡ ಮಾದಾಪಟ್ಟಣದಲ್ಲಿರುವ ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಹೇಶ್ ಅವರಿಗೆ ಸೇರಿದ ಮನೆಯ ಮೇಲೂ ದಾಳಿ ನಡೆಸಿದೆ.
Advertisement