ಕಂದಾಯ ಕಚೇರಿಗಳಲ್ಲಿ ಅಕ್ರಮ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು

ಬೆಂಗಳೂರು ಕಂದಾಯ ಕಚೇರಿಗಳಲ್ಲಿ ಅಕ್ರಮಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು, ವಿಚಾರಣೆ ಆರಂಭಿಸಿದ್ದಾರೆ.
ಬಿಎಸ್ ಪಾಟೀಲ್
ಬಿಎಸ್ ಪಾಟೀಲ್

ಬೆಂಗಳೂರು: ಬೆಂಗಳೂರು ಕಂದಾಯ ಕಚೇರಿಗಳಲ್ಲಿ ಅಕ್ರಮಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು, ವಿಚಾರಣೆ ಆರಂಭಿಸಿದ್ದಾರೆ.

ಲೋಕಾಯುಕ್ತ ಪೊಲೀಸ್‌ ಮತ್ತು ನ್ಯಾಯಾಂಗ ವಿಭಾಗಗಳ ಅಧಿಕಾರಿಗಳ ಜಂಟಿ ತಂಡಗಳು ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ಬೆಂಗಳೂರು ದಕ್ಷಿಣ ಮತ್ತು ಉತ್ತರ ಉಪ ವಿಭಾಗಾಧಿಕಾರಿಗಳ ಕಚೇರಿಗಳು, ಉತ್ತರ, ದಕ್ಷಿಣ, ಪೂರ್ವ, ಯಲಹಂಕ ಮತ್ತು ಆನೇಕಲ್‌ ತಾಲ್ಲೂಕು ಕಚೇರಿಗಳಲ್ಲಿ ಸೆಪ್ಟೆಂಬರ್‌ 27ರಂದು ದಿಢೀರ್‌ ತಪಾಸಣೆ ಮಾಡಿದ್ದವು.

ಕಂದಾಯ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್‌ ಮತ್ತು ನ್ಯಾಯಾಂಗ ವಿಭಾಗಗಳ ಅಧಿಕಾರಿಗಳ ಜಂಟಿ ತಂಡಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. 

ಈ ವೇಳೆ ಅಧಿಕಾರಿಗಳ ಕಚೇರಿ ಮತ್ತು ಮುಭಾಗದಲ್ಲಿ ಲೆದರ್ ಕುರ್ಚಿಗಳು, ಸೋಫಾಗಳು, ಎಸಿಗಳು, ಟಿವಿ, ಫ್ರಿಡ್ಜ್, ಓವನ್, ಡೈನಿಂಗ್ ಟೇಬಲ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದವು. ಈ ಸಂಬಂಧ ವರದಿ ಹಾಗೂ ದಾಖಲೆಗಳನ್ನು ಸಲ್ಲಿಸುವಂತೆಸೂಚನೆ ನೀಡಿದ್ದರು. ಆದರೆ, ದಾಖಲೆ ಒದಗಿಸುವಲ್ಲಿ ವಿಫಲರಾಗಿದ್ದರು. ಮಾಹಿತಿಗಳ ಪ್ರಕಾರ ಅಪಾರ್ಟ್'ಮೆಂಟ್ ಬಿಲ್ಡರ್ ಹಾಗೂ ಕೆಲ ವ್ಯಾಪಾರಿಗಳು ಈ ವಸ್ತುಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com