social_icon

ಸಿಲಿಕಾನ್ ಸಿಟಿ ರಸ್ತೆಗಳು ಗುಂಡಿಮಯ: ಮಾನವ ಸರಪಳಿ ನಿರ್ಮಿಸಿ ಅಪಾರ್ಟ್'ಮೆಂಟ್ ನಿವಾಸಿಗಳಿಂದ ಪ್ರತಿಭಟನೆ

ನಗರದ ಸುತ್ತಮುತ್ತಲಿನ ರಸ್ತೆಗಳು ಹೊಂಡಗಳಿಂದ ತುಂಬಿ ಹೋಗಿದ್ದು, ಭೀಕರ ಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಗಮನ ಸೆಳೆಯುವ ಉದ್ದೇಶದಿಂದ ಪ್ರೆಸ್ಟೀಜ್ ಕೆನ್ಸಿಂಗ್ಟನ್ ಗಾರ್ಡನ್ಸ್ ಮತ್ತು ಇತರ ವಸತಿ ಸಂಕೀರ್ಣಗಳ ನಿವಾಸಿಗಳು ಜಾಲಹಳ್ಳಿಯ ಎಚ್‌ಎಂಟಿ ಸೌಲಭ್ಯದ ಬಳಿಯ...

Published: 24th October 2022 11:09 AM  |   Last Updated: 24th October 2022 11:17 AM   |  A+A-


Residents of Prestige Kensington Gardens protest against bad roads and potholes in Jalahalli in Bengaluru on Sunday.

ಅಪಾರ್ಟ್'ಮೆಂಟ್ ನಿವಾಸಿಗಳಿಂದ ಪ್ರತಿಭಟನೆ.

Posted By : manjula
Source : The New Indian Express

ಬೆಂಗಳೂರು: ನಗರದ ಸುತ್ತಮುತ್ತಲಿನ ರಸ್ತೆಗಳು ಹೊಂಡಗಳಿಂದ ತುಂಬಿ ಹೋಗಿದ್ದು, ಭೀಕರ ಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಗಮನ ಸೆಳೆಯುವ ಉದ್ದೇಶದಿಂದ ಪ್ರೆಸ್ಟೀಜ್ ಕೆನ್ಸಿಂಗ್ಟನ್ ಗಾರ್ಡನ್ಸ್ ಮತ್ತು ಇತರ ವಸತಿ ಸಂಕೀರ್ಣಗಳ ನಿವಾಸಿಗಳು ಜಾಲಹಳ್ಳಿಯ ಎಚ್‌ಎಂಟಿ ಸೌಲಭ್ಯದ ಬಳಿಯ ಅಪಾರ್ಟ್‌ಮೆಂಟ್ ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಆರಂಭದಲ್ಲಿ ಕಾಂಪ್ಲೆಕ್ಸ್‌ನಿಂದ ಎಚ್‌ಎಂಟಿ ಆಸ್ಪತ್ರೆ ವರೆಗೂ ತೆರಳಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು, ಆದರೆ ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಅಪಾರ್ಟ್'ಮೆಂಟ್ ಬಳಿಯೇ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಬಿಇಎಲ್ ವೃತ್ತದಿಂದ ಎಚ್‌ಎಂಟಿ ಮುಖ್ಯರಸ್ತೆ, ಜಾಲಹಳ್ಳಿ ಮೂಲಕ ಪೀಣ್ಯ ಮೆಟ್ರೋ ನಿಲ್ದಾಣದವರೆಗಿನ ರಸ್ತೆಗಳು, ಪಾದಚಾರಿ ಮಾರ್ಗಗಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಮಳೆಗೂ ಮುನ್ನವೇ ರಸ್ತೆಗಳ ಸ್ಥಿತಿ ಹದಗೆಟ್ಟಿತ್ತು. ಮಳೆ ನಂತರ ಮತ್ತಷ್ಟು ಹದಗೆಟ್ಟಿದೆ. ರಸ್ತೆಗುಂಡಿಗಳಿಂದ ಕೆಲ ತಿಂಗಳುಗಳಿಂದ ಹಲವು ಅಪಘಾತಗಳು ಸಂಭವಿಸಿವೆ ಎಂದು ಪ್ರತಿಭಟನೆ ನಡೆಸುತ್ತಿದ್ದ ಅಪಾರ್ಟ್'ಮೆಂಟ್ ನಿವಾಸಿಯೊಬ್ಬರು ಹೇಳಿದ್ದಾರೆ. 

ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಂಭವಿಸಿದ ಅಪಘಾತದಲ್ಲಿ ಹಿರಿಯ ನಾಗರೀಕರೊಬ್ಬರು ಹಲವು ಮೂಳೆ ಮುರಿತಗಳಿಗೆ ಒಳಗಾಗಿದ್ದು, ಕಳೆದ 3 ತಿಂಗಳಿನಿಂದ ಹಾಸಿಗೆಯಲ್ಲಿ ಮಲಗಿದ್ದಾರೆ. ಕಳೆದ ಆರು ತಿಂಗಳಿನಿಂದ ಈ ಸಮಸ್ಯೆಗಳ ಕುರಿತು ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ. ಒತ್ತಡದಿಂದ ಕೆಲ ತೇಪೆ ಕೆಲಸ ಮಾಡುತ್ತಿದ್ದಾರೆ. ಆದರೆ, ಸಾಧಾರಣ ಮಳೆಯಾದರೂ ಗುಂಡಿಗಳು ಮತ್ತೆ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಜನರ ಸಂಕಷ್ಟವನ್ನು ಅಧಿಕಾರಿಗಳ ಗಮನಕ್ಕೆ ತರಲು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಮತ್ತೊಬ್ಬ ನಿವಾಸಿ ತಿಳಿಸಿದರು.


Stay up to date on all the latest ರಾಜ್ಯ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp