ರಾಯಚೂರು: ರಾಯಚೂರಿನಿಂದ ಬೆಳಗಾವಿಗೆ ಹೊರಟಿದ್ದ ರಾಜಹಂಸ ಬಸ್ ಚಾಲಕನಿಗೆ ಮಾರ್ಗಮಧ್ಯೆ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಲಿಂಗಸೂಗೂರಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು ಬಸ್ ಚಾಲಕ ಶ್ರೀನಿವಾಸ್ ಎಂಬುವರು ಹೃದಯಾಘಾತವಾಗಿದೆ. ಹೀಗಾಗಿ ಬಸ್ ರಸ್ತೆ ಬದಿ ಪಲ್ಟಿಯಾಗಿದ್ದು ಬಸ್ ನಲ್ಲಿದ್ದ 14 ಮಂದಿಗೆ ಗಾಯಗಳಾಗಿವೆ.
ಬಸ್ಸಲ್ಲಿದ್ದ ಪ್ರಯಾಣಿಕರ ಪೈಕಿ 14 ಜನ ಗಾಯಗೊಂಡಿದ್ದು ಅವರನ್ನು ಲಿಂಗಸೂಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement