ರಾಯಚೂರು: ಹೃದಯಾಘಾತದಿಂದ ರಾಜಹಂಸ ಬಸ್ ಚಾಲಕ ಸಾವು; ಅದೃಷ್ಟವಶಾತ್ ಪ್ರಯಾಣಿಕರು ಪಾರು, 14 ಜನರಿಗೆ ಗಾಯ!   

ರಾಯಚೂರಿನಿಂದ ಬೆಳಗಾವಿಗೆ ಹೊರಟಿದ್ದ ರಾಜಹಂಸ ಬಸ್ ಚಾಲಕನಿಗೆ ಮಾರ್ಗಮಧ್ಯೆ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಯಚೂರು: ರಾಯಚೂರಿನಿಂದ ಬೆಳಗಾವಿಗೆ ಹೊರಟಿದ್ದ ರಾಜಹಂಸ ಬಸ್ ಚಾಲಕನಿಗೆ ಮಾರ್ಗಮಧ್ಯೆ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 

ಲಿಂಗಸೂಗೂರಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು ಬಸ್ ಚಾಲಕ ಶ್ರೀನಿವಾಸ್ ಎಂಬುವರು ಹೃದಯಾಘಾತವಾಗಿದೆ. ಹೀಗಾಗಿ ಬಸ್ ರಸ್ತೆ ಬದಿ ಪಲ್ಟಿಯಾಗಿದ್ದು ಬಸ್ ನಲ್ಲಿದ್ದ 14 ಮಂದಿಗೆ ಗಾಯಗಳಾಗಿವೆ.

ಬಸ್ಸಲ್ಲಿದ್ದ ಪ್ರಯಾಣಿಕರ ಪೈಕಿ 14 ಜನ ಗಾಯಗೊಂಡಿದ್ದು ಅವರನ್ನು ಲಿಂಗಸೂಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com