ಶಿವಮೊಗ್ಗ: ಶಿವಮೊಗ್ಗದಲ್ಲಿ ಕೋಮು ಸೌಹಾರ್ದತೆ ದೃಷ್ಟಿಯಿಂದ ಮತ್ತೆ ಪರಿಸ್ಥಿತಿ ಹದಗೆಡುವ ಲಕ್ಷಣಗಳು ಗೋಚರಿಸಿದ್ದು ಸಾವರ್ಕರ್ ಕಾರ್ಯಕ್ರಮಕ್ಕೆ ಹೋಗಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿದ ಮೂವರು ವ್ಯಕ್ತಿಗಳು ಆರ್ ಎಸ್ಎಸ್ ವಿರೋಧಿ ಘೋಷಣೆ ಕೂಗಿದ್ದಾರೆ.
ಈ ಘಟನೆಯಿಂದ ಎಚ್ಚೆತ್ತಿರುವ ಶಿವಮೊಗ್ಗ ಪೊಲೀಸರು, ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಈ ವರ್ಷ ಫೆ.20 ರಂದು ಶಿವಮೊಗ್ಗದಲ್ಲಿ ಹಿಂದು ಕಾರ್ಯಕರ್ತ ಹರ್ಷನ ಹತ್ಯೆಯಾಗಿತ್ತು.
ಈಗ ದಾಳಿಗೆ ಒಳಗಾದ ವ್ಯಕ್ತಿ ಪ್ರಕಾಶ್ ತಮ್ಮ ಮೇಲೆ ದಾಳಿ ಮಾಡಿದವರು ಸ್ಥಳೀಯರಲ್ಲ ಎಂದು ಹೇಳಿದ್ದು ತಾವು ಸಾವರ್ಕರ್ ಅವರಿಗೆ ಸಂಬಂಧಿಸಿದ ಕಾರ್ಯಕ್ರಮ ಮುಗಿಸಿ ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಭರಮಪ್ಪ ಲೇಔಟ್ ನಲ್ಲಿ ದಾಳಿ ನಡೆದಿದ್ದು ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿ ಆರ್ಎಸ್ಎಸ್ ಹಾಗೂ ಹಿಂದೂ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದ್ದಾರೆ. ದಾಳಿಯಲ್ಲಿ ಪ್ರಕಾಶ್ ತಲೆಗೆ ಪೆಟ್ಟು ಬಿದ್ದಿದ್ದು, ಆತ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement