ಬಿಜೆಪಿ ಸರ್ಕಾರದಿಂದ ಕಾಂಗ್ರೆಸ್ ನ ಕಲ್ಯಾಣ ಯೋಜನೆಗಳ ಸ್ಥಗಿತ: ಸಿದ್ದರಾಮಯ್ಯ ಆರೋಪ

ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಎಲ್ಲಾ ಪ್ರಮುಖ ಯೋಜನೆಗಳು ಮತ್ತು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಎಲ್ಲಾ ಪ್ರಮುಖ ಯೋಜನೆಗಳು ಮತ್ತು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಂಡ್ಯ ತಾಲೂಕಿನ ತಿರುಮಲಾಪುರದಲ್ಲಿ ಹುಲಿಯೂರಮ್ಮ ದೇವಸ್ಥಾನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯಲಿಲ್ಲ, ಬಡವರಿಗೆ ದ್ರೋಹ ಬಗೆದಿಲ್ಲ ಎಂದಿದ್ದಾರೆ.

ಮೀಸಲಾತಿ ಹೆಚ್ಚಿಸಲು ಕೆಲವು ಸಮುದಾಯಗಳು ಹೋರಾಟ ವಿಚಾರವಾಗಿ ಮಾತನಾಡಿದ ಅವರು, ಯಾರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ್ದಾರೆ, ಶೋಷಣೆಗೆ ಒಳಪಟ್ಟಿದ್ದಾರೆ. ಅವರಿಗೆ ಮೀಸಲಾತಿ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ.

ಈ ಸರ್ಕಾರಗಳಿಂದ ಜನರ ಕಲ್ಯಾಣ ಸಾಧ್ಯವಿಲ್ಲ ಎಂಬುದು ಇದೀಗ ಎಲ್ಲರಿಗೂ ಅರ್ಥವಾಗುತ್ತಿದೆ. ದೇಶ, ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು ಬಡವರು, ರೈತರು, ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜನವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಮಾರಕವಾಗಿವೆ. ಅಲ್ಲದೆ ಧರ್ಮ ಧರ್ಮಗಳ ನಡುವೆ ವಿಷಬೀಜ ಭಿತ್ತಿ ಜನರು ನೆಮ್ಮದಿಯಿಂದ ಬದುಕಲಾರದ ವಾತಾವರಣ ನಿರ್ಮಾಣ ಮಾಡಲಾಗಿದೆ. ಈ ಎಲ್ಲಾ ಕಾರಣಗಳಿಂದ ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಬರುವ ಸಂಪೂರ್ಣ ವಿಶ್ವಾಸವಿದೆ ಎಂದರು.

ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಿಲ್ಲ ಎಂದು ಆರೋಪಿಸಿದರು. ಎಸ್‌ಸಿ/ಎಸ್‌ಟಿಗಳ ಪರವಾಗಿ ಮಾತನಾಡಲು ಅವರಿಗೆ ಯಾವ ನೈತಿಕ ಹಕ್ಕುಗಳಿವೆ? ಇಂತಹ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಬೇಕೆ,'' ಎಂದು ಪ್ರಶ್ನಿಸಿದರು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲಿದೆ. ಮಂಡ್ಯದಲ್ಲಿ ಮೈಶುಗರ್ ಕಾರ್ಖಾನೆ ತೆರೆಯಲು ಪಕ್ಷ ಕ್ರಮ ಕೈಗೊಳ್ಳಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com