ಮಂಡ್ಯ: ಪ್ರಥಮ ವರ್ಷದ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡ ಬಳಿಕ ನಟ ಪುನೀತ್ ರಾಜ್‍ಕುಮಾರ್ ಅಭಿಮಾನಿ ಆತ್ಮಹತ್ಯೆ

ನಟ ಪುನೀತ್‌ರಾಜ್‌ಕುಮಾರ್ ಮೃತಪಟ್ಟು ಒಂದು ವರ್ಷ ಕಳೆದಿದ್ದರೂ ಅಭಿಮಾನಿಗಳ ನೋವು ಮಾತ್ರ ಕಡಿಮೆಯಾಗಿಲ್ಲ. ಶನಿವಾರವಷ್ಟೇ ಅಪ್ಪು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಟ ಪುನೀತ್‌ ರಾಜ್‌ಕುಮಾರ್ ಅವರೊಂದಿಗೆ ಮೃತ ಕಿರಣ್
ನಟ ಪುನೀತ್‌ ರಾಜ್‌ಕುಮಾರ್ ಅವರೊಂದಿಗೆ ಮೃತ ಕಿರಣ್

ಮಂಡ್ಯ: ನಟ ಪುನೀತ್‌ರಾಜ್‌ಕುಮಾರ್ ಮೃತಪಟ್ಟು ಒಂದು ವರ್ಷ ಕಳೆದಿದ್ದರೂ ಅಭಿಮಾನಿಗಳ ನೋವು ಮಾತ್ರ ಕಡಿಮೆಯಾಗಿಲ್ಲ. ಶನಿವಾರವಷ್ಟೇ ಅಪ್ಪು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ಆನಂದೂರು ಗ್ರಾಮದಲ್ಲಿ ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಹರೀಶ್ ಎಂಬುವವರ ಪುತ್ರ 22 ವರ್ಷದ ಕಿರಣ್ ಶನಿವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರಣ್ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದು, ತಮ್ಮ‌ ನೆಚ್ಚಿನ ನಟನ ಪ್ರಥಮ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ತಾವೇ ಮುಂದೆ ನಿಂತು ಆಯೋಜಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಬಿಡುಗಡೆಯಾದ ಅಪ್ಪು ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ 25 ಟಿಕೆಟ್‌ಗಳನ್ನು ತಂದು ಸ್ನೇಹಿತರಿಗೆ ನೀಡಿದ್ದರು. ಪುಣ್ಯ ಸ್ಮರಣೆ ಕಾರ್ಯಕ್ರಮ ಮುಗಿದ ಬಳಿಕ ಮನೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕೆ.ಆರ್.ಎಸ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com