ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೃತ ಚಿರತೆ ಪತ್ತೆ: ಅರಣ್ಯ ಇಲಾಖೆ ಅಧಿಕಾರಿಗಳಿಂದ ತನಿಖೆ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಬಿಳಿಗುಂಬ ಸಮೀಪ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿದೆ.
ಗಾಯಗೊಂಡು ಮೃತಪಟ್ಟಿರುವ ಚಿರತೆ
ಗಾಯಗೊಂಡು ಮೃತಪಟ್ಟಿರುವ ಚಿರತೆ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಬಿಳಿಗುಂಬ ಸಮೀಪ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿದೆ.

ವಾಹನ ಡಿಕ್ಕಿಯಾದ ರಭಸಕ್ಕೆ ಚಿರತೆಯ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದೆ. ಇಂದು ಮುಂಜಾನೆ ವಾಯುವಿಹಾರಕ್ಕೆ ಹೋಗುತ್ತಿದ್ದವರಿಗೆ ಕಾಣಿಸಿದ್ದು ಚಿರತೆಯ ಮೃತದೇಹವನ್ನು ಕಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com