ಬೆಂಗಳೂರಿನಲ್ಲಿ ಮುಂದುವರೆದ ಮಳೆ ಆರ್ಭಟ: ಪೂರ್ವ ಭಾಗದ ಶಾಲೆಗಳಿಗೆ ರಜೆ ಘೋಷಣೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರವೂ ಮಳೆ ಆರ್ಭಟ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಬೆಂಗಳೂರು ಪೂರ್ವ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿ...
ಬೆಂಗಳೂರು
ಬೆಂಗಳೂರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರವೂ ಮಳೆ ಆರ್ಭಟ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಬೆಂಗಳೂರು ಪೂರ್ವ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿ ಬೆಂಗಳೂರಿನ ದಕ್ಷಿಣ ವಲಯ-4 ಕೆ.ಆರ್.ಪುರಂ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ) ಆದೇಶ ಹೊರಡಿಸಿದ್ದಾರೆ.

ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಪೂರ್ವ ತಾಲೂಕಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಮುಂದಿನ ಎರಡನೇ ಶನಿವಾರ ಪೂರ್ಣ ದಿನ ತರಗತಿ ನಡೆಸಲು ಸೂಚಿಸಲಾಗಿದೆ.

ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ 7-9-2022ರಂದು ರಜೆ ಘೋಷಿಸಲಾಗಿದೆ ಎಂದು ಬಿಇಒ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com