social_icon

ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆ: ವಿಧಾನ ಪರಿಷತ್ ನಲ್ಲಿ ಗದ್ದಲ-ಕೋಲಾಹಲ

10 ವರ್ಷಗಳಿಂದ ಮೂಲೆ ಸೇರಿದ್ದ ವಕ್ಫ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನ ಪರಿಷತ್​ನಲ್ಲಿ ಮಂಡಿಸಲಾಯಿತು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲ ಉಂಟಾಯಿತು.

Published: 24th September 2022 11:45 AM  |   Last Updated: 24th September 2022 02:04 PM   |  A+A-


Anwar Manippady

ಅನ್ವರ್ ಮಾಣಿಪ್ಪಾಡಿ

Posted By : shilpa
Source : The New Indian Express

ಬೆಂಗಳೂರು: 10 ವರ್ಷಗಳಿಂದ ಮೂಲೆ ಸೇರಿದ್ದ ವಕ್ಫ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನ ಪರಿಷತ್​ನಲ್ಲಿ ಮಂಡಿಸಲಾಯಿತು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲ ಉಂಟಾಯಿತು.

ವಕ್ಫ್ ಆಸ್ತಿಯಲ್ಲಿನ ಅಕ್ರಮಗಳ ಕುರಿತು ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸರ್ಕಾರ ಮಂಡಿಸಿದ ರೀತಿಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳು, ವರದಿಯನ್ನು ಮಂಡಿಸುವ ಮೊದಲು ಅದರ ವಿಷಯಗಳನ್ನು ರಹಸ್ಯವಾಗಿಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ. ಪರಿಷತ್ತಿನಲ್ಲಿ ಖಜಾನೆ ಮತ್ತು ವಿರೋಧ ಪಕ್ಷದ ಪೀಠಗಳು ಫಲಕಗಳನ್ನು ಪ್ರದರ್ಶಿಸಿ ಬಾವಿಗೆ ಪ್ರವೇಶಿಸಿದವು.

ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ರವಿಕುಮಾರ್, ವರದಿಯಲ್ಲಿ ಜಮೀರ್ ಅಹಮದ್,‌ ಖಮರುಲ್ ಇಸ್ಲಾಂ, ನಜೀರ್ ಅಹಮದ್ ಇತ್ಯಾದಿ ಕಾಂಗ್ರೆಸ್ ನಾಯಕರ ಹೆಸರಿದೆ. ಈ ಬಗ್ಗೆ ಚರ್ಚೆಯಾಗಬೇಕು ಎಂದರು. ಇದಕ್ಕೆ ಕಿಡಿಕಾರಿದ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಚರ್ಚೆಗೆ ಅವಕಾಶ ನೀಡಿ ಎಲ್ಲವನ್ನೂ ಚರ್ಚೆ ಮಾಡೋಣ ಎಂದರು.

ವಿಧಾನ ಪರಿಷತ್​ನಲ್ಲಿ ಧನವಿನಿಯೋಗ ವಿಧೇಯಕಕ್ಕೆ ಅಂಗೀಕಾರ ಸಿಕ್ಕ ನಂತರ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆ ಮಾಡಿದರು. 29 ಸಾವಿರ ಎಕರೆ ವಕ್ಫ್ ಆಸ್ತಿ ಕಬಳಿಕೆ ಆಗಿದೆ. 2-3 ಲಕ್ಷ ಕೋಟಿ ಮೌಲ್ಯದ ಹಗರಣ ನಡೆದಿದೆ ಎಂದು ಹೇಳಲಾಗಿತ್ತು. ಹಾಗಾಗಿ 2012ರಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಸಿದ್ದಪಡಿಸಿದ್ದ ವರದಿಯನ್ನು ಸದನದ ಮೂಲಕ ಸಾರ್ವಜನಿಕರಿಗೆ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: ನಡೆಯದ ಪರಿಷತ್ ಸಭಾಪತಿ ಚುನಾವಣೆ; ಕೊಟ್ಟ ಮಾತಿಗೆ ತಪ್ಪಿದ ಬೊಮ್ಮಾಯಿ-ಜೋಶಿ; ಬಿಜೆಪಿ ಹಿಂದೇಟಿನಿಂದ ಬಸವರಾಜ ಹೊರಟ್ಟಿ ಅತಂತ್ರ!

ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್ ಸದಸ್ಯರು ಬೇಕಿದ್ದರೆ ಇಡಿ, ಸಿಬಿಐ ತನಿಖೆಗೆ ಕೊಡಿ ಎಂದು ಸವಾಲು ಹಾಕಿದರು. ಈ ವೇಳೆ ಸದನದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಗದ್ದಲದ ವಾತಾವರಣ ಸೃಷ್ಟಿಯಾಯಿತು ನಂತರ ಸಭಾಪತಿಗಳು ಕಲಾಪವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಯಿತು.

ಜೆಡಿಎಸ್ ಎಲ್‌ಪಿ ಮುಖಂಡ ಎಸ್‌ಎಲ್‌ ಭೋಜೇಗೌಡ ವರದಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಸರ್ಕಾರವು ಅದರ ವಿಷಯಗಳನ್ನು ರಹಸ್ಯವಾಗಿಡಲು ವಿಫಲವಾಗಿದೆ ಎಂದು ಹೇಳಿದರು. ಪ್ರಶ್ನೋತ್ತರ ಕಲಾಪಕ್ಕೆ ಮುನ್ನ ಯಾವುದೇ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರೊಟೆಂ ಅಧ್ಯಕ್ಷ ರಘುನಾಥ ರಾವ್ ಮಲ್ಕಾಪುರೆ ತಿಳಿಸಿದ್ದಾರೆ. ನಂತರ ಮತ್ತೆ ಹರಿಪ್ರಸಾದ್ ವಿಷಯ ಪ್ರಸ್ತಾಪಿಸಿದರು. ಮಲ್ಕಾಪುರೆ ಅವರು ಪ್ರತಿ ಸದಸ್ಯರಿಗೆ ಪ್ರತಿಯನ್ನು ವಿತರಿಸಲು ಸರ್ಕಾರಕ್ಕೆ ಸೂಚಿಸಿದರು.

ಅಧ್ಯಕ್ಷರು ವಿಧೇಯಕಗಳನ್ನು ಕೈಗೆತ್ತಿಕೊಳ್ಳಲು ಮುಂದಾದಾಗ, ಪ್ರತಿಪಕ್ಷಗಳು 40% ಕಮಿಷನ್ ಆರೋಪದ ಮೇಲೆ ಚರ್ಚೆಗೆ ಒತ್ತಾಯಿಸಿದವು, ಇದು ಕೋಲಾಹಲಕ್ಕೆ ಕಾರಣವಾಯಿತು. ಕಾಂಗ್ರೆಸ್ ಸದಸ್ಯರು ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಹಿಡಿದುಕೊಂಡು ಸದನದ ಬಾವಿಗೆ ನುಗ್ಗಿ ಜೆಡಿಎಸ್ ಸದಸ್ಯರು ದನಿಗೂಡಿಸಿದರೆ, ಬಿಜೆಪಿ ಸದಸ್ಯರು ಕೂಡ ಕಾಂಗ್ರೆಸ್ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಗೊಂದಲದ ನಡುವೆಯೇ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಧೇಯಕಗಳು ಅಂಗೀಕಾರವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಕೂಡ ಪ್ರತಿಭಟನೆ ನಡೆಸಿ ಸಭಾಪತಿಯವರು ಸದನವನ್ನು ಮುಂದೂಡಿದರು.


Stay up to date on all the latest ರಾಜ್ಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp