ಬೀದರ್: ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಂಗಟಿ ಗ್ರಾಮದಲ್ಲಿ ನಡೆದಿದೆ.
ಮೃತರು 32 ವರ್ಷದ ಸುನೀತಾ, ಪುತ್ರ 12 ವರ್ಷದ ನಾಗಶೆಟ್ಟಿ, 33 ವರ್ಷದ ಆನಂದಾ ಹಾಗೂ 14 ವರ್ಷ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸುನೀತಾ ಹಾಗೂ ಆನಂದಾ ಅವರು ಬಟ್ಟೆ ತೊಳೆಯಲು ಹೋದಾಗ ಮಕ್ಕಳು ಈಜಲು ನೀರಿಗೆ ಇಳಿದಿದ್ದರು. ಈ ವೇಳೆ ಅವರು ಕೆರೆಯಲ್ಲಿನ ಕೆಸರಿನಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಮೇಲಕ್ಕೆತ್ತಲು ಹೋದ ತಾಯಂದಿರೂ ಸಹ ನೀರು ಪಾಲಾಗಿದ್ದಾರೆ.
ಜನವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Advertisement