social_icon

ತ್ರಿಪಥ ಹೆದ್ದಾರಿ ಯೋಜನೆ ರದ್ದುಗೊಳಿಸಿ: ಸಿಎಂ ಬೊಮ್ಮಾಯಿಗೆ ಗ್ರೀನ್‌ಪೀಸ್ ಇಂಡಿಯಾ ಪತ್ರ

ಸೆಪ್ಟಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಯಿಂದ ಉಂಟಾದ ಅನಾಹುತದ ನಂತರ ಗ್ರೀನ್ ಪೀಸ್ ಇಂಡಿಯಾ ಸಂಸ್ಥೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ.

Published: 27th September 2022 02:10 PM  |   Last Updated: 27th September 2022 02:10 PM   |  A+A-


Basavaraja bommai

ಬಸವರಾಜ ಬೊಮ್ಮಾಯಿ

Posted By : shilpa
Source : The New Indian Express

ಬೆಂಗಳೂರು: ಸೆಪ್ಟಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಯಿಂದ ಉಂಟಾದ ಅನಾಹುತದ ನಂತರ ಗ್ರೀನ್ ಪೀಸ್ ಇಂಡಿಯಾ ಸಂಸ್ಥೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ.

ತ್ರಿಪಥ ಹೆದ್ದಾರಿ ನಿರ್ಮಾಣ ಯೋಜನೆ ಅವೈಜ್ಞಾನಿಕವಾಗಿರುವುದರಿಂದ ಈ ಯೋಜನೆ ರದ್ದುಗೊಳಿಸಬೇಕೆಂದು ಗ್ರೀನ್ ಪೀಸ್ ಇಂಡಿಯಾ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ.

ನಗರಕ್ಕೆ ಹಾಗೂ ಬೆಂಗಳೂರಿನ ನಾಗರಿಕರಿಗೆ ಅನಾನುಕೂಲವಾಗುವಂತ ಹೆಚ್ಚಿನ ಮೇಲ್ಸೇತುವೆ ಹಾಗೂ ಎಲಿವೇಟೆಡ್ ಕಾರಿಡಾರ್ ಗಳನ್ನು ನಿರ್ಮಿಸಬಾರದು ಎಂದು ಹೇಳಿದೆ.  ಖಾಸಗಿ ವಾಹನಗಳ ಹೆಚ್ಚು ಬಳಕೆಯನ್ನು ನಿರ್ಬಂಧಿಸಿ ಸಾರ್ವಜನಿಕ ಸಾರಿಗೆ ಬಳಸಲು ಜನರಿಗೆ ಹೆಚ್ಚಿನ ಅವಕಾಶ ಮಾಡಿಕೊಡಬೇಕೆಂದು ಗ್ರೀನ್  ಪೀಸ್ ಇಂಡಿಯಾ ಅಭಿಯಾನದ ಮ್ಯಾನೇಜರ್ ಅವಿನಾಶ್ ಕುಮಾರ್ ಚಂಚಲ್ ಸಲಹೆ ನೀಡಿದ್ದಾರೆ.

ನಗರದಲ್ಲಿ ಪ್ರವಾಹವನ್ನು ತಡೆಗಟ್ಟಲು ಮತ್ತು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ದೀರ್ಘಾವಧಿಯ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದೆ.

ಸೆಪ್ಟಂಬರ್ ಮೊದಲ ವಾರದಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಪ್ರವಾಹದಲ್ಲಿ 2 ಸಾವಿರ ಮನೆಗಳು ಮುಳುಗಿದ್ದು, 22, ಸಾವಿರ ವಾಹನಗಳಿಗೆ ಹಾನಿಯಾಗಿದೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಜೊತೆಗೆ ಜನರು ಅನುಭವಿಸಿದ ಕಷ್ಟಗಳನ್ನು ಹೇಳತೀರಲಾಗದು ಎಂದಿದೆ.

ಇಂತಹ ಅನಾಹುತಗಳು ಸಂಭವಿಸಿದಾಗ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರ ಸರಿಯಾದ ಪ್ಲಾನ್ ರೂಪಿಸದಿರುವುದು ಎದ್ದು ಕಾಣುತ್ತಿದೆ.  ನಾಗರಿಕರ ಸಹಯೋಗದೊಂದಿಗೆ ಸ್ಥಳೀಯ ಸರ್ಕಾರಗಳು ಕ್ರಿಯಾ ಯೋಜನೆ ರೂಪಿಸುವಂತೆ ಒತ್ತಾಯಿಸಿದೆ.  ನಗರದಲ್ಲಿರುವ ಕಂಪನಿಗಳು ಮತ್ತು ಟೆಕ್ ಪಾರ್ಕ್ ಗಳು ತಮ್ಮ ಸಿಬ್ಬಂದಿ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಪ್ರೋತ್ಸಾಹಿಸಬೇಕು ಎಂದು ಗ್ರೀನ್ ಪೀಸ್ ಇಂಡಿಯಾ ಆಗ್ರಹಿಸಿದೆ.

ಬೆಂಗಳೂರಿನಲ್ಲಿ ಒತ್ತುವರಿ ಕುರಿತು ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, 2013ರಿಂದ 2018ರವರೆಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 1,953 ಒತ್ತುವರಿ ಗುರುತಿಸಿ, ಸುಮಾರು 1,300 ಒತ್ತುವರಿ ತೆರವುಗೊಳಿಸಲಾಗಿತ್ತು.

ಉಳಿದ 600 ಒತ್ತುವರಿ ತೆರವು ಮುಂದಿನ ಸರ್ಕಾರದಿಂದ ಮಾಡಬಹುದಿತ್ತು, ಆದರೆ ಕಳೆದ ಮೂರು ವರ್ಷಗಳಲ್ಲಿ ಒಂದೇ ಒಂದು ಒತ್ತುವರಿ ತೆರವು ಕಾರ್ಯ ನಡೆದಿಲ್ಲ. ಬೊಮ್ಮನಹಳ್ಳಿ ವಲಯದಲ್ಲಿ 47 ಕೆರೆಗಳಿದ್ದು, ಇದರಲ್ಲಿ 196 ಎಕರೆ ಒತ್ತುವರಿಯಾಗಿದೆ, ಮಹದೇವಪುರದ 52 ಕೆರೆಗಳಲ್ಲಿ 1,845 ಎಕರೆ ಹಾಗೂ ಯಲಹಂಕದ 28 ಕೆರೆಗಳಲ್ಲಿ  133 ಎಕರೆ, ಆರ್‌ಆರ್‌ನಗರದ  37 ಕೆರೆಗಳಲ್ಲಿ 160 ಎಕರೆ ಒತ್ತುವರಿಯಾಗಿದೆ ಎಂದು ಹೇಳಿದ್ದಾರೆ.


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp