ನಿರ್ಮಾಣ ಹಂತದ ಗಂಗೊಳ್ಳಿಯ ಮೀನುಗಾರಿಕಾ ಜೆಟ್ಟಿ ಕುಸಿತ: ತನಿಖೆಗೆ ಕಾಂಗ್ರೆಸ್ ಒತ್ತಾಯ

ಉಡುಪಿ ಜಿಲ್ಲೆ ಗೊಂಗೊಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನುಗಾರಿಕಾ ಜೆಟ್ಟಿ ಕುಸಿದು ಬಿದ್ದಿದೆ.
ಮೀನುಗಾರಿಕಾ ಜೆಟ್ಟಿ ಕುಸಿತದ ಚಿತ್ರ
ಮೀನುಗಾರಿಕಾ ಜೆಟ್ಟಿ ಕುಸಿತದ ಚಿತ್ರ

ಬೆಂಗಳೂರು: ಉಡುಪಿ ಜಿಲ್ಲೆ ಗೊಂಗೊಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನುಗಾರಿಕಾ ಜೆಟ್ಟಿ ಕುಸಿದು ಬಿದ್ದಿದೆ. ಈ ವಿಡಿಯೋವನ್ನು ತನ್ನ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದು, ತನಿಖೆಗೆ ಒತ್ತಾಯಿಸಿದೆ.

ಬಿಜೆಪಿಯ ಭ್ರಷ್ಟಾಚಾರಕ್ಕೆ, 40% ಕಮಿಷನ್ ಲೂಟಿಗೆ ಮತ್ತೊಂದು ಕಾಮಗಾರಿ ಕುಸಿಯುವ ಮೂಲಕ ಸಾಕ್ಷ್ಯ ಒದಗಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನಿರ್ಮಾಣ ಹಂತದಲ್ಲಿದ್ದ  ಮೀನುಗಾರಿಕಾ ಜೆಟ್ಟಿ ಕುಸಿತ  40%ಕಮಿಷನ್ ಕರ್ಮದ ಸಾಕ್ಷಿಯಲ್ಲವೇ? ಪೇ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಇದರ ತನಿಖೆಯಾಗಬೇಕಲ್ಲವೇ ಎಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com