ಒಂದು ಟಿಕೆಟ್ ನಲ್ಲಿ ಇಡೀ ಕರ್ನಾಟಕ ಸುತ್ತಿ ಬನ್ನಿ: ಪ್ರವಾಸೋದ್ಯಮ ಇಲಾಖೆಯಿಂದ ಯೋಜನೆ ಜಾರಿ

ಕರ್ನಾಟಕದಲ್ಲಿ ರಮ್ಯ ಮನೋಹರ ತಾಣಗಳನ್ನು ವೀಕ್ಷಿಸಲು ಬಯಸುವ ವಿದೇಶಿ ಮತ್ತು ದೇಶಿ ಪ್ರವಾಸಿಗರು ಇನ್ನು ಒಂದು ತಿಂಗಳು ತಮ್ಮ ತಮ್ಮ ಸ್ಥಳಗಳಿಂದ ಸಂಪೂರ್ಣ ಪ್ಯಾಕೇಜ್‌ಗಳನ್ನು ತಡೆರಹಿತ ರೀತಿಯಲ್ಲಿ ಬುಕ್ ಮಾಡಲು ಸಾಧ್ಯವಾಗುತ್ತದೆ.
ವಿಶ್ವಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ನಿನ್ನೆ ವಿಧಾನಸೌಧ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆಯ ಕ್ಯಾರಾವ್ಯಾನ್ ವಾಹನಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿಯವರು ಚಾಲನೆ ನೀಡಿದರು
ವಿಶ್ವಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ನಿನ್ನೆ ವಿಧಾನಸೌಧ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆಯ ಕ್ಯಾರಾವ್ಯಾನ್ ವಾಹನಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿಯವರು ಚಾಲನೆ ನೀಡಿದರು

ಬೆಂಗಳೂರು: ಕರ್ನಾಟಕದಲ್ಲಿ ರಮ್ಯ ಮನೋಹರ ತಾಣಗಳನ್ನು ವೀಕ್ಷಿಸಲು ಬಯಸುವ ವಿದೇಶಿ ಮತ್ತು ದೇಶಿ ಪ್ರವಾಸಿಗರು ಇನ್ನು ಒಂದು ತಿಂಗಳು ತಮ್ಮ ತಮ್ಮ ಸ್ಥಳಗಳಿಂದ ಸಂಪೂರ್ಣ ಪ್ಯಾಕೇಜ್‌ಗಳನ್ನು ತಡೆರಹಿತ ರೀತಿಯಲ್ಲಿ ಬುಕ್ ಮಾಡಲು ಸಾಧ್ಯವಾಗುತ್ತದೆ. ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಯೋಜನೆ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಈ ಯೋಜನೆಯು ಪ್ರವಾಸಿಗರಿಗೆ ಟಿಕೆಟ್ ಬುಕ್ಕಿಂಗ್, ಸ್ಥಳ ವೀಕ್ಷಣೆ,  ವಿಮಾನ ಬುಕಿಂಗ್, ತಾಣಗಳ ಭೇಟಿಗಳು, ಮಾರ್ಗದರ್ಶಿಗಳು ಮತ್ತು ಆಹಾರದೊಂದಿಗೆ ಎಲ್ಲವನ್ನೂ ಒಳಗೊಂಡಿರುತ್ತದೆ. ಇದನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಜಾರಿಗೊಳಿಸಲಾಗುವುದು. ಪ್ರವಾಸಿಗರು ತೊಂದರೆಯಿಲ್ಲದೆ ಪ್ರಯಾಣಿಸಲು ಅತ್ಯಗತ್ಯ ಎಂದು ಸಿಎಂ ಹೇಳಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ 2026 ರ ಪರಿಷ್ಕೃತ ಪ್ರವಾಸೋದ್ಯಮ ನೀತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಒನ್-ಟಿಕೆಟ್ ಸರ್ಕ್ಯೂಟ್ ನ್ನು ಪ್ರಾರಂಭಿಸಲು ಕೆಲಸ ಮಾಡುತ್ತಿದೆ. ಪ್ರವಾಸೋದ್ಯಮ ಇಲಾಖೆಯು ಉತ್ತರ (ಹಂಪಿ ಮತ್ತು ಸುತ್ತಮುತ್ತಲ) ಮತ್ತು ದಕ್ಷಿಣ (ಮೈಸೂರು ಮತ್ತು ಸುತ್ತಮುತ್ತಲಿನ) ಎರಡು ಸರ್ಕ್ಯೂಟ್‌ಗಳನ್ನು ಸಿದ್ಧಪಡಿಸುವ ಕೆಲಸ ಮಾಡುತ್ತಿದೆ.

ಯುನೆಸ್ಕೋ ಸೈಟ್‌ಗಳನ್ನು ಮಾತ್ರ ಅವಲಂಬಿಸಬೇಡಿ: ಇಲಾಖೆಯು ಇನ್ನಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದ ಬೊಮ್ಮಾಯಿ, ಪ್ರವಾಸಿಗರನ್ನು ಸೆಳೆಯಲು ಇಲಾಖೆಯು ಇನ್ನು ಮುಂದೆ ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ)-ಘೋಷಿತ ತಾಣಗಳನ್ನು ಅವಲಂಬಿಸಬಾರದು ಎಂದು ಹೇಳಿದರು.

ಕರ್ನಾಟಕವು ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಅನೇಕ ಪುರಾತತ್ತ್ವ ಶಾಸ್ತ್ರದ ಸ್ಥಳಗಳನ್ನು ಹೊಂದಿದೆ. ಅವುಗಳನ್ನು ಜನಪ್ರಿಯಗೊಳಿಸುವುದು, ಸೌಲಭ್ಯಗಳನ್ನು ಸುಧಾರಿಸುವುದು ಮತ್ತು ಮಾರುಕಟ್ಟೆಯನ್ನು ಇನ್ನಷ್ಟು ಸ್ಪರ್ಧಾತ್ಮಕಗೊಳಿಸುವುದು ಅಗತ್ಯವಿದೆ. ಸೈಟ್‌ಗಳ ಇತಿಹಾಸವನ್ನು ವಿವರಿಸಲು ತಜ್ಞರನ್ನು ಸಂಪರ್ಕಿಸಬೇಕು ಎಂದು ಹೇಳಿದರು. 

ಮೂರು ವರ್ಷಗಳಲ್ಲಿ ಪ್ರವಾಸೋದ್ಯಮವನ್ನು 30 ಲಕ್ಷದಿಂದ ಒಂದು ಕೋಟಿ ರೂಪಾಯಿಗೆ ಹೆಚ್ಚಿಸುವ ಗುರಿಯನ್ನು ಪ್ರವಾಸೋದ್ಯಮ ಇಲಾಖೆಗೆ ಸಿಎಂ ನಿಗದಿಪಡಿಸಿದ್ದಾರೆ. ಕಂದಾಯ, ಪಿಡಬ್ಲ್ಯುಡಿ, ರಸ್ತೆಗಳು ಮತ್ತು ಮೂಲಸೌಕರ್ಯ ಸೇರಿದಂತೆ ಎಲ್ಲ ಇಲಾಖೆಗಳು ಪ್ರವಾಸೋದ್ಯಮ ಇಲಾಖೆಯೊಂದಿಗೆ ಕೆಲಸ ಮಾಡಬೇಕು ಎಂದು ಅವರು ಪ್ರತಿಪಾದಿಸಿದರು.

ಕರ್ನಾಟಕದ ಖ್ಯಾತ ಅಂಜನಾದ್ರಿ ಬೆಟ್ಟಗಳು, ನಂದಿ ಬೆಟ್ಟಗಳು, ಯಾಣ ಮತ್ತು ಚಿಕ್ಕಮಗಳೂರುಗಳಲ್ಲಿ ರೋಪ್‌ವೇ ಯೋಜನೆಗಳನ್ನು ಪಿಪಿಪಿ ಅಡಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು. ಅಂಜನಾದ್ರಿ ಬೆಟ್ಟದಲ್ಲಿ ಸೌಲಭ್ಯಗಳನ್ನು ಸುಧಾರಿಸಲು ಮತ್ತು 600 ಕೊಠಡಿಗಳ ವಸತಿ ನಿಲಯವನ್ನು ನಿರ್ಮಿಸಲು 100 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದರು. 

365 ನೋಂದಾಯಿತ ಮಾರ್ಗದರ್ಶಕರಿಗೆ ನೀಡುವ ಪ್ರೋತ್ಸಾಹಧನವನ್ನು ಮಾಸಿಕ 2,000 ರೂಪಾಯಿಗಳಿಂದ 5 ಸಾವಿರ ರೂಪಾಯಿಗಳಿಗೆ ಹೆಚ್ಚಿಸುವಂತೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಮಾಡಿದ ಪ್ರಸ್ತಾವನೆಗೆ ಸಿಎಂ ಒಪ್ಪಿಗೆ ನೀಡಿದರು. ಮಾರ್ಗದರ್ಶಕರಿಗೆ ತರಬೇತಿ, ಸಮವಸ್ತ್ರ, ಬ್ಯಾಡ್ಜ್ ಮತ್ತು ಭಾಷಾ ಕೌಶಲ್ಯ ಸುಧಾರಣೆ ತರಗತಿಗಳನ್ನು ನೀಡಲಾಗುವುದು ಎಂದರು. 

500 ಕೋಟಿ ವೆಚ್ಚದಲ್ಲಿ ಸ್ವದೇಶ್ ದರ್ಶನ್ 2.0 ಅಡಿಯಲ್ಲಿ ಕರ್ನಾಟಕದ ಐದು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದರು. ಕೇಂದ್ರ ಸರ್ಕಾರದ ಪರ್ವತ ಮಾಲಾ ಯೋಜನೆ ಅಡಿಯಲ್ಲಿ 15 ಸ್ಥಳಗಳಲ್ಲಿ ರೋಪ್‌ವೇ ಯೋಜನೆಗಳನ್ನು ಸಹ ಪ್ರಸ್ತಾಪಿಸಲಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗದ ನಂತರ, ಹೋಟೆಲ್‌ಗಳಲ್ಲಿ ಉಳಿಯಲು ಹಿಂಜರಿಯುವ ಪ್ರವಾಸಿಗರು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿಯಲ್ಲಿ ಪ್ರಚಾರ ಮಾಡಲಾಗುತ್ತಿರುವ ಕಾರವಾನ್ ಪ್ರವಾಸೋದ್ಯಮವನ್ನು ಬಳಸಿಕೊಳ್ಳಬಹುದು ಎಂದು ಆನಂದ್ ಸಿಂಗ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com