ಬೆಂಗಳೂರು: ಚುನಾವಣೆ ಹೊತ್ತಿನಲ್ಲೇ ಕರ್ನಾಟಕದಲ್ಲಿ ಅಮುಲ್ ವಿರುದ್ಧ ನಂದಿನಿ ಕದನದ ಬಿಸಿಯೇರುತ್ತಿದೆ. ಮೇಲ್ನೋಟಕ್ಕೆ ಇದು ಕನ್ನಡಿಗರ ಅಭಿಮಾನ, ಭಾವನೆ ಮತ್ತು ಗ್ರಾಮೀಣ ಆರ್ಥಿಕತೆ ಸ್ವದೇಶಿ ಬ್ರಾಂಡ್ನ ಮೇಲೆ ಅವಲಂಬಿತವಾಗಿದ್ದು, ಕಾರ್ಪೊರೇಟ್ ಕದನದ ಕೇಂದ್ರಬಿಂದುವಾಗಿ ಕಂಡುಬರುತ್ತಿದ್ದರೂ ಮುಂಬರುವ ದಿನಗಳಲ್ಲಿ ರಾಜಕೀಯವಾಗಿಯೂ ಪ್ರಾಬಲ್ಯ ಸಾಧಿಸಬಹುದಾದ ಸಮಸ್ಯೆಯಿಂದ ಪಾರಾಗಲು ಆಡಳಿತಾರೂಢ ಬಿಜೆಪಿ ಕಸರತ್ತು ನಡೆಸಬೇಕಾಗಬಹುದು.
ಏನಿದು ಅಮುಲ್ Vs ನಂದಿನಿ ಜಟಾಪಟಿ? ಗುಜರಾತ್ ನ ಅಮುಲ್ ಬ್ರಾಂಡ್ ಬೆಂಗಳೂರಿನ ಹಾಲು ಮತ್ತು ಮೊಸರಿನ ಮಾರುಕಟ್ಟೆ ಲಗ್ಗೆ ಹಾಕಿರುವುದನ್ನು ಪ್ರತಿಪಕ್ಷಗಳು ಏಕೆ ವಿರೋಧಿಸುತ್ತಿವೆ?
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಮುಲ್ ಮತ್ತು ಕೆಎಂಎಫ್ ಎರಡು ಬ್ರ್ಯಾಂಡ್ ಗಳ ವಿಲೀನದ ಹೇಳಿಕೆಯ ತಿಂಗಳ ನಂತರ ಗುಜರಾತ್ ಮೂಲದ ಅಮುಲ್ ತನ್ನ ಹಾಲು ಮತ್ತು ಮೊಸರು ಪೂರೈಸಲು ಕರ್ನಾಟಕ ಮಾರುಕಟ್ಟೆಗೆ ಪ್ರವೇಶಿಸುವುದಾಗಿ ಏಪ್ರಿಲ್ 5 ರಂದು ಘೋಷಿಸಿದ್ದು, ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದ್ದು, ಹಿಗ್ಗಾಮುಗ್ಗಾ ಟೀಕಾ ಪ್ರಹಾರ ನಡೆಸುತ್ತಿವೆ.
ಶಾ ಸಹಕಾರ ಖಾತೆಯನ್ನೂ ಹೊಂದಿದ್ದಾರೆ. ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಕರ್ನಾಟಕದ 21,000 ಕೋಟಿ ರೂ. ಮೊತ್ತದ ನಂದಿನಿ ಬ್ರ್ಯಾಂಡ್ ನ್ನು ಅಮುಲ್ ಜೊತೆಗೆ ವಿಲೀನಗೊಳಿಸುಲಾಗುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿವೆ. ನಂದಿನಿಯೊಂದಿಗೆ ರಾಜ್ಯದ ಜನತೆಗೆ ಭಾವನಾತ್ಮಕ ಸಂಬಂಧವಿದೆ. 49 ವರ್ಷ ಇತಿಹಾಸವಿರುವ ಕೆಎಂಎಫ್ ನ ನಂದಿನಿಯನ್ನು ಗುಜರಾತಿನ ಅಮುಲ್ ನೊಂದಿಗೆ ವಿಲೀನಗೊಳಿಸಲು ಬಿಜೆಪಿ ಬಯಸಿದೆ. ಇದರಿಂದಾಗಿ ದೇಶದಲ್ಲಿ "ಒಂದು ರಾಷ್ಟ್ರ, ಒಂದು ಅಮುಲ್" ಇರುತ್ತದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಈ ಆರೋಪವನ್ನು ಬಿಜೆಪಿ ಬಲವಾಗಿ ತಳ್ಳಿ ಹಾಕಿದೆ.
ನಂದಿನಿಯನ್ನು "ಮಾರಾಟ" ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆರೋಪಿಸಿದ್ದಾರೆ. ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿಯೇ ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಯನ್ನು ಮುಗಿಸಲು ಅಮುಲ್ ಈ ಕೆಟ್ಟ ಆಲೋಚನೆಯನ್ನು ಹೊಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಅಮೂಲ್ ವಿಚಾರದಲ್ಲಿ ಸರ್ಕಾರ ಸ್ಪಷ್ಟವಾಗಿದೆ. ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್ ಆಗಿದೆ. ಇದು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ, ಇತರ ರಾಜ್ಯಗಳಲ್ಲಿಯೂ ನಂದಿನಿ ಬ್ರ್ಯಾಂಡ್ ಜನಪ್ರಿಯಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ. ಒಂದು ಲೀಟರ್ ನಂದಿನಿ ಟೋನ್ಡ್ ಹಾಲಿನ ಬೆಲೆ ರೂ. 39 ಆದರೆ, ಇದೇ ಪ್ರಮಾಣದ ಅಮುಲ್ ಬೆಲೆ ರೂ. 52 ಆಗಿದೆ.
ವಿವರಣೆ:
Advertisement