ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲು!

ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.!
ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.!

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 

ಗೋಕಾಕ್ ತಾಲೂಕಿನ ಧೂಪದಾಳ ಪಟ್ಟಣದ ಪ್ರವಾಸಿ ಮಂದಿರದ ಬಳಿ ಈ ಘಟನೆ ನಡೆದಿದೆ. ಮೃತರನ್ನು ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದ 18 ವರ್ಷದ ಸಂತೋಷ ಬಾಬು ಇಟಗಿ ಮತ್ತು ಅಜಯ್ ಬಾಬು ಜೋರೆ, 22 ವರ್ಷದ ಕೃಷ್ಣಾ ಬಾಬು ಜೋರೆ ಹಾಗೂ 19 ವರ್ಷದ ಆನಂದ ಕೋಕರೆ ಎಂದು ಗುರುತಿಸಲಾಗಿದೆ.

ಇಂದು ಬಾರ್ ಗೆ ರಜೆ ಇದ್ದ ಕಾರಣ ಮಧ್ಯಾಹ್ನ ಈಜಾಡಲೆಂದು ಆರು ಯುವಕರ ತಂಡ ನದಿಗೆ ಹೋಗಿತ್ತು. ಈ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. 

ಮೃತರು ಘಟಪ್ರಭಾದ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಎನ್ನಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com