ಹೋಳಾಗಲಿಲ್ಲ ದೇವರ ಮುಂದೆ ಒಡೆದ ಈಡುಗಾಯಿ: ಸೋಮಣ್ಣಗೆ ಆಶೀರ್ವಾದ ಮಾಡಲಿಲ್ವಾ ಚಾಮುಂಡಿ ತಾಯಿ?

ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಸತಿ ಸಚಿವ ವಿ.ಸೋಮಣ್ಣ ಮೈಸೂರಿನ ಚಾಮುಂಡೇಶ್ವರಿ ದೇವಾಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಚಾಮುಂಡೇಶ್ವರಿ ದೇವಾಲಯದಲ್ಲಿ ಸೋಮಣ್ಣ ಪೂಜೆ
ಚಾಮುಂಡೇಶ್ವರಿ ದೇವಾಲಯದಲ್ಲಿ ಸೋಮಣ್ಣ ಪೂಜೆ
Updated on

ಮೈಸೂರು: ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಸತಿ ಸಚಿವ ವಿ.ಸೋಮಣ್ಣ ಮೈಸೂರಿನ ಚಾಮುಂಡೇಶ್ವರಿ ದೇವಾಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಚಾಮುಂಡಿ ಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತೆಂಗಿನಕಾಯಿ ಒಡೆಯಲು ಯತ್ನಿಸಿದ ವಸತಿ ಸಚಿವ ವಿ.ಸೋಮಣ್ಣ ಅವರು ಮುಜುಗರದ ಪರಿಸ್ಥಿತಿಗೆ ಸಿಲುಕಿದರು.

ಸೋಮಣ್ಣ ಹಾಕಿದ ಇಡುಗಾಯಿ ಒಡೆಯಲಿಲ್ಲ. ತೆಂಗಿನಕಾಯಿಯು ವ್ಯಕ್ತಿಯನ್ನು ದುಷ್ಟರಿಂದ ರಕ್ಷಿಸುತ್ತದೆ ಎಂದು ಸಾಮಾನ್ಯವಾಗಿ ಪರಿಗಣಿಸಲಾಗುತ್ತದೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವಾಗ ತೆಂಗಿನಕಾಯಿ ಒಡೆಯುವುದು ಒಂದು ಪ್ರಮುಖ ಆಚರಣೆಯಾಗಿದೆ. ತೆಂಗಿನಕಾಯಿ ಒಡೆಯದ ಕಾರಣ ಅಲ್ಲಿ ಸೇರಿದ್ದವರು ಅಶುಭ ಸೂಚನೆಯೇ ಎಂದು ಚರ್ಚೆ ನಡೆಸುತ್ತಿರುವುದು ಕೇಳಿಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com