ಬೆಂಗಳೂರು: ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೇ 4 ರಂದು ಉಡುಪಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೋಮವಾರ ತಿಳಿಸಿದ್ದಾರೆ.
ಯೋಗಿ ಆದಿತ್ಯನಾಥ್ ಕೂಡ ಚುನಾವಣ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್ ಕೂಡ ರಾಷ್ಟ್ರೀಯ ನಾಯಕರು, ಸ್ಟಾರ್ ಪ್ರಚಾರಕರನ್ನು ಜಿಲ್ಲೆಗೆ ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.
ನಗರ ಅಥವಾ ಭೇಟಿಗೆ ಸೂಕ್ತವಾದ ಸ್ಥಳಗಳಲ್ಲಿ ಬೃಹತ್ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ. ರಾಷ್ಟ್ರೀಯ ನಾಯಕರು ಜಿಲ್ಲಾ ಪಕ್ಷಕ್ಕೆ ವಿಷಯ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮೋದಿ ಅವರೊಂದಿಗೆ ಬರುವ ನಿರೀಕ್ಷೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
Advertisement