ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ: ಶೆಟ್ಟರ್ ಆರೋಪಕ್ಕೆ ಬಿ.ಎಲ್.ಸಂತೋಷ್

ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಜಗದೀಶ್ ಶೆಟ್ಟರ್ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬಿಎಲ್.ಸಂತೋಷ್
ಬಿಎಲ್.ಸಂತೋಷ್

ಮೈಸೂರು: ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಜಗದೀಶ್ ಶೆಟ್ಟರ್ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯಲ್ಲಿ ಹಲವು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ. ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ. ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು.

ಈ ಹಿಂದೆ ಹೇಳಿಕೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಲ್ಲದೇ, ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com