ಗಂಡ-ಹೆಂಡ್ತಿ ಜಗಳ: ಕೋಪದಿಂದ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಭೂಪ, FIR ದಾಖಲು

ಗಂಡ-ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿ ಕೋಪದಿಂದ ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಕೈ ಬೆರಳನ್ನೇ ಕಚ್ಚಿ ತಿಂದಿರುವ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಗಂಡ-ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿ ಕೋಪದಿಂದ ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಕೈ ಬೆರಳನ್ನೇ ಕಚ್ಚಿ ತಿಂದಿರುವ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೊಣನಕುಂಟೆ (Konanakunte) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಂಡ-ಹೆಂಡತಿ ಜಗಳದ ವೇಳೆ ಪತಿರಾಯ ತನ್ನ ಪತ್ನಿಯ ಕೈ ಬೆರಳನ್ನೇ ಕಚ್ಚಿ ತಿಂದಿದ್ದಾನೆ. ಆರೋಪಿ ಪತಿಯನ್ನು ವಿಜಯಕುಮಾರ್ ಎಂದು ಗುರುತಿಸಲಾಗಿದ್ದು, ಸಂತ್ರಸ್ಥೆ ಪತ್ನಿ ಹೆಸರು ಪುಷ್ಪಾ ಎಂದು ಹೇಳಲಾಗಿದೆ. 

ಪೊಲೀಸರ ಪ್ರಕಾರ ಈ ಘಟನೆ ಜುಲೈ 28 ರಂದು ನಡೆದಿದೆ. ಪುಷ್ಪಾ ಎಂಬ ಮಹಿಳೆಯು ಗಂಡನ ಕಾಟ ತಾಳಲಾರದೇ ತನ್ನ ಮಗನ ಜೊತೆಗೆ ಬೇರೆ ಮನೆ ಮಾಡಿ ವಾಸವಿದ್ದರು. ಆದರೂ ಕೂಡ ಆಕೆಗೆ ಗಂಡನ ಕಾಟದಿಂದ ಮುಕ್ತಿ ಸಿಕ್ಕಿರಲಿಲ್ಲ. ಅದರಂತೆ ಇಬ್ಬರು ಜಗಳ ಮಾಡುತ್ತಿದ್ದಾರೆ. ಈ ವೇಳೆ ಏಕಾಎಕಿ ಪತಿ ವಿಜಯಕುಮಾರ್ ಪತ್ನಿಯ ಬೆರಳನ್ನೇ ಕಚ್ಚಿ ತಿಂದಿದ್ದಾನೆ. ನಂತರ ನಿನ್ನನ್ನೂ ಕೂಡ ಕೊಂದು ಇದೇ ರೀತಿಯಾಗಿ ತಿನ್ನುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಪುಷ್ಪಾ ಮತ್ತು ವಿಜಯ್​ಕುಮಾರ್​ಗೆ 23 ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಕೆಲ ವರ್ಷಗಳಿಂದ ಪತ್ನಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಈ ಹಿನ್ನಲೆ ಗಂಡನಿಂದ ಬೇಸತ್ತು ತನ್ನ ಮಗನ ಜೊತೆ ಬೇರೆಡೆ ಮನೆ ಮಾಡಿಕೊಂಡಿದ್ದರು. ಕಳೆದ‌ ತಿಂಗಳ ಜುಲೈ 28ನೇ ತಾರೀಖು ಪತಿ ವಿಜಯಕುಮಾರ್ ಪತ್ನಿ ಇದ್ದ ಮನೆಗೆ ಹೋಗಿ ಜಗಳ ತೆಗೆದಿದ್ದ. ಈ ವೇಳೆ ಪತ್ನಿಯ ಎಡಗೈ ಬೆರಳನ್ನೇ ಕಚ್ಚಿ ಕಚ್ಚಿ ತಿಂದಿದ್ದಾನಂತೆ. ಅಲ್ಲದೇ ರೌಡಿಶೀಟರ್​ಗಳನ್ನ ಬಿಟ್ಟು ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಪತ್ನಿ ಪುಷ್ಪ ಸದ್ಯ ಪತಿಯ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com