76ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ: ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಗಣ್ಯರಿಂದ ಶುಭಾಶಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 76ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 76ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಡಿಕೆ.ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಗತಿಗಾಗಿ, ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಲು ಜೊತೆಯಾಗಿ ಸಾಗೋಣ ಎಂದು ಹೇಳಿದ್ದಾರೆ.

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ಅವರಿಗೆ ಹೆಚ್ಚಿನ ಆಯುರಾರೋಗ್ಯ ನೀಡಲಿಯೆಂದು ಹಾರೈಸುತ್ತೇನೆಂದು ಹೇಳಿದ್ದಾರೆ.

ಜೆಡಿಎಸ್ ವರಿಷ್ಠ ಹೆಚ್'ಡಿ.ದೇವೇಗೌಡ ಅವರು ಟ್ವೀಟ್ ಮಾಡಿ, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಶುಭವಾಗಲಿ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com