ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಉಪಸ್ಥಿತಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಉಪಸ್ಥಿತಿ

ಕರ್ನಾಟಕ ರಾಜ್ಯ ಹೆದ್ದಾರಿಗಳನ್ನು ಕೇಂದ್ರದ ತಂಡ ಪರಿಶೀಲನೆ ನಡೆಸಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆದ್ದಾರಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಗುರುವಾರ ಭರವಸೆ ನೀಡಿದ್ದಾರೆ.

ಬೆಂಗಳೂರು/ಬೆಳಗಾವಿ: ಹೆದ್ದಾರಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಗುರುವಾರ ಭರವಸೆ ನೀಡಿದ್ದಾರೆ.

ಬೆಂಗಳೂರು - ಮೈಸೂರು ಎಕ್ಷ್‌ಪ್ರೆಸ್ ವೇಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ದೆಹಲಿ ಪ್ರವಾಸದ ಸಂದರ್ಭದಲ್ಲಿ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಅಪಘಾತಗಳು ಹಾಗೂ ಅವೈಜ್ಞಾನಿಕ ಕಾಮಗಾರಿಗಳ ಕುರಿತಾಗಿ ಗಮನ ಸೆಳೆದರು. ಹಾಗೂ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು.

ಬೈಪಾಸ್‌ಗಳ ಪ್ರವೇಶ ಮತ್ತು ನಿರ್ಗಮನವನ್ನು ಒದಗಿಸುವಂತೆ ಮತ್ತು ಹೆದ್ದಾರಿಯಲ್ಲಿ ರಸ್ತೆ ಬದಿಯ ಸೌಕರ್ಯಗಳನ್ನು ಒದಗಿಸುವಂತೆ ಗಡ್ಕರಿ ಅವರಿಗೆ ಸಿಎಂ ಮನವಿ ಮಾಡಿದರು.

ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣ ಹಾಗೂ ಹೆದ್ದಾರಿಗಳಲ್ಲಿ ಅಪಘಾತ ತಡೆಗೆ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಜಾರಕಿಹೊಳಿ ಕೂಡ ಹಾಜರಿದ್ದರು.

ಸಚಿವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿಯವರು, ರಾಜ್ಯದಲ್ಲಿನ ಹಲವಾರು ಪಿಡಬ್ಲ್ಯುಡಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಶೇಷವಾಗಿ ಶಿರಾಡಿ ಘಾಟ್‌ನಲ್ಲಿನ ಸುರಂಗ ಮಾರ್ಗ. ಹೆದ್ದಾರಿಗಳಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಿಸಲು ಗಡ್ಕರಿ ಅವರಿಗೆ ಮನವಿ ಮಾಡಿಕೊಳ್ಳಲಾಯಿತು. ಅಲ್ಲದೆ, 2023-24ರ ವಾರ್ಷಿಕ ಯೋಜನೆ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೂಲ ಕಾಮಗಾರಿಗಳ ಮಂಜೂರಾತಿಯನ್ನು 10,000 ಕೋಟಿ ರೂ.ಗಳಿಗೆ ಹೆಚ್ಚಿಸಲು ಮತ್ತು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಗಳ (CRIF) ಅಡಿಯಲ್ಲಿ 1,000 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಗಡ್ಕರಿ ಅವರಿಗೆ ಮನವಿ ಮಾಡಿಕೊಳ್ಳಲಾಯಿತು.

ರಾಜ್ಯ ರಸ್ತೆಗಳು ಮತ್ತು ಪ್ರಮುಖ ಜಿಲ್ಲಾ ರಸ್ತೆಗಳು. ನಿರ್ವಹಣೆ ಮತ್ತು ದುರಸ್ತಿ (ಎಂ & ಆರ್) ಅಡಿಯಲ್ಲಿ ಅನುದಾನವನ್ನು 50 ಕೋಟಿ ರೂ.ಗೆ ಹೆಚ್ಚಿಸಲು ಮತ್ತು ಪ್ರವಾಹ ಹಾನಿ ದುರಸ್ತಿ (ಎಫ್‌ಡಿಆರ್) ಅಡಿಯಲ್ಲಿ ರೂ 250 ಕೋಟಿ ಅನುದಾನವನ್ನು ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದರು. ಗಡ್ಕರಿಯವರು ರಾಜ್ಯಕ್ಕೆ ಸಹಾಯ ಮಾಡುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

ಕೇರಳ ಮತ್ತು ಕರ್ನಾಟಕವನ್ನು ಗುಂಡ್ಲುಪೇಟೆ, ನಂಜನಗೂಡು ಮತ್ತು ಮೈಸೂರು ಮೂಲಕ ಕೊಳ್ಳೇಗಾಲಕ್ಕೆ ಸಂಪರ್ಕಿಸುವ NH-766 ಅನ್ನು ವಿಸ್ತರಿಸಲು ಮತ್ತು ಕರ್ನಾಟಕ ಮತ್ತು ತಮಿಳುನಾಡಿಗೆ ಮಳವಳ್ಳಿ ಮತ್ತು ಕೊಳ್ಳೇಗಾಲದ ಮೂಲಕ ಕನಕಪುರಕ್ಕೆ ಸಂಪರ್ಕಿಸುವ NH-948 ಅನ್ನು ವಿಸ್ತರಿಸುವ ಕುರಿತು ಮುಖ್ಯಮಂತ್ರಿಗಳು ಚರ್ಚಿಸಿದರು. ಈ ಯೋಜನೆಗಳಿಗೆ NHAI ನಿಂದ ಅನುಮೋದನೆ ನೀಡುವಂತೆ ಮನವಿ ಮಾಡಿದರು ಎಂದು ಮಾಹಿತಿ ನೀಡಿದರು.

Related Stories

No stories found.

Advertisement

X
Kannada Prabha
www.kannadaprabha.com