ನೈಸ್ ಯೋಜನೆ ಅಕ್ರಮ ಕುರಿತು ದೆಹಲಿಯಲ್ಲಿ ಪುರಾವೆ ಬಿಡುಗಡೆ; ಪ್ರಧಾನಿ ಮೋದಿಗೆ ದಾಖಲೆ ನೀಡುತ್ತೇನೆ: ಎಚ್ ಡಿ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ವ್ಯವಹಾರದಲ್ಲಿ 1,000 ಕೋಟಿ ರೂಪಾಯಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ವ್ಯವಹಾರದಲ್ಲಿ 1,000 ಕೋಟಿ ರೂಪಾಯಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸ್ (ನೈಸ್) ಯೋಜನೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೇಳಿದರು. 

ನಾನು ಇಷ್ಟೇ ಆಗಿದೆ ಎಂದು ಲೆಕ್ಕ ಹಾಕಲಾಗುವುದಿಲ್ಲ. ಆದರೆ 1,000 ಕೋಟಿ ರೂ.ಗಿಂತ ಹೆಚ್ಚು ಭ್ರಷ್ಟಚಾರ ನಡೆದಿದೆ. ಒಂದು ಹುದ್ದೆಗೆ ಮೂರು-ನಾಲ್ಕು ವರ್ಗಾವಣೆ ಅಥವಾ ಪೋಸ್ಟಿಂಗ್ ಆದೇಶಗಳನ್ನು ನೀಡಲಾಗಿದೆ. ಇದು ಒಂದು ಹಗರಣವಾಗಿದೆ. ಹಣ ಕೂಡ ಹೋಗಿದೆ. ಹಣ ನೀಡಿದ ಹಲವು ಅಧಿಕಾರಿಗಳಿಗೆ ಪೋಸ್ಟಿಂಗ್ ಸಿಕ್ಕಿಲ್ಲ, ಇದು ನಾನು ಹೇಳುತ್ತಿಲ್ಲ, ಅಧಿಕಾರಿಗಳೇ ಇದನ್ನು ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಜೀವನಕ್ಕೆ ಸಾಕಾಗುವಷ್ಟು ಸಂಪತ್ತು ಹೊಂದಿರುವ ಸಚಿವರೊಬ್ಬರು ಇಲಾಖೆಯಲ್ಲಿ ಪೋಸ್ಟಿಂಗ್‌ಗಾಗಿ 10ರಿಂದ 15 ಲಕ್ಷ ರೂಪಾಯಿ ಕೇಳುತ್ತಿದ್ದಾರೆ. ಅದನ್ನು ಕೇಳಿ ನನಗೆ ಆಶ್ಚರ್ಯವಾಯಿತು ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಎಲ್ಲ ಇಲಾಖೆಗಳಲ್ಲಿ ನಡೆದಿರುವ ವರ್ಗಾವಣೆ ಹಾಗೂ ಹುದ್ದೆಗಳಲ್ಲಿ ಭ್ರಷ್ಟಾಚಾರದ ಪ್ರಮಾಣ ಎಷ್ಟಿರಬಹುದು ಎಂಬ ಪ್ರಶ್ನೆಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು. ನೈಸ್ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿಯನ್ನು ಯಾವಾಗ ಭೇಟಿ ಮಾಡುತ್ತೀರಿ ಎಂಬ ಪ್ರಶ್ನೆಗೆ, ಮಾಜಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದು, ನಾನು ಅವರ ಅಪಾಯಿಂಟ್‌ಮೆಂಟ್ ಪಡೆಯಬೇಕಾಗಿದೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಲವಾರು ದಾಖಲೆಗಳು ಮತ್ತು ಸಾಮಗ್ರಿಗಳಿವೆ. ನಾನು ಪ್ರಧಾನಿ ಮತ್ತು ಗೃಹ ಸಚಿವರ ಸಮಯವನ್ನು ಕೇಳಿದ್ದು ನಾನು ಅದನ್ನು ಅವರಿಗೆ ಸಲ್ಲಿಸುತ್ತೇನೆ ಎಂದರು.

ಇತ್ತೀಚೆಗಷ್ಟೇ ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಜತೆಗೂಡಿ ನೈಸ್‌ ಯೋಜನೆಯನ್ನು ಕಾಂಗ್ರೆಸ್‌ ಸರಕಾರ ಕೈಗೆತ್ತಿಕೊಂಡು ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕುಮಾರಸ್ವಾಮಿ ಒತ್ತಾಯಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಅವರದ್ದು ಹಿಟ್‌ ಅಂಡ್‌ ರನ್‌ ಕೇಸ್‌ ಎಂದು ಕರೆದಿದ್ದಕ್ಕೆ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿಗಳು, ನಾನು ತಮಾಷೆಗಾಗಿ ವಿಷಯ ಪ್ರಸ್ತಾಪಿಸುವುದಿಲ್ಲ. ನಾನು ಹಿಟ್ ಅಂಡ್ ರನ್ ಸ್ವಭಾವದವನಲ್ಲ, ನಾನು ಮುಖ್ಯಮಂತ್ರಿಯವರಿಗೆ ಇದನ್ನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ಎಂದರು.

ಈ ರಾಜ್ಯದಲ್ಲಿ ಹಿಟ್ ಅಂಡ್ ರನ್‌ನಲ್ಲಿ ತೊಡಗಿರುವುದು ಕಾಂಗ್ರೆಸ್ ಎಂದು ಕುಮಾರಸ್ವಾಮಿ ಹೇಳಿದರು. ಹಿಂದಿನ ಬಿಜೆಪಿ ಸರ್ಕಾರವು 40 ಪರ್ಸೆಂಟ್ ಕಮಿಷನ್ ಎಂದು ಆರೋಪಿಸಿ 'ಪೇಸಿಎಂ' ಪ್ರಚಾರ ಮಾಡಿದ ನಂತರ, ಅವರು ಒಂದಾದರೂ ಪುರಾವೆ ನೀಡಲು ಸಮರ್ಥರಾಗಿದ್ದಾರೆಯೇ?. ಅಧಿಕಾರಕ್ಕೆ ಬಂದರೂ ಯಾವುದೇ ಪುರಾವೆ ನೀಡಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದ ಕಡೆಯಿಂದ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ಸಚಿವರು ತಮ್ಮ ಇಲಾಖೆಯಲ್ಲಿನ ಗುತ್ತಿಗೆದಾರರಿಂದ 'ನಿರ್ದಿಷ್ಟ ಶೇಕಡಾವಾರು' ಕೇಳಿದ್ದಾರೆ ಎಂದು ಹೇಳಿದ್ದರು. ಇನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ 250 ಕೋಟಿ ರೂ. ದೆಹಲಿಗೆ ತಲುಪಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com