ಬೆಂಗಳೂರು: ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್ನಲ್ಲಿ ನೆರವೇರಿಸಲಾಗಿದ್ದು, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
ಇಂದು ಸಂಜೆ ಹರಿಶ್ಚಂದ್ರಘಾಟ್ನಲ್ಲಿ ಈಡಿಗ ಬಿಲ್ಲವ ಸಮುದಾಯದ ಸಂಪ್ರದಾಯದಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ನಡೆದಿದ್ದು, ಪತಿ ವಿಜಯ್ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.
ಕುಟುಂಬಸ್ಥರು, ಹಲವು ಗಣ್ಯರು ಸ್ಪಂದನಾಗೆ ಕಣ್ಣೀರಿನ ವಿದಾಯ ಹೇಳಿದರು.
ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್ವರೆಗೆ ಸ್ಪಂದನಾ ಅವರ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ಅಂತಿಮಯಾತ್ರೆಯ ವೇಳೆ ರಸ್ತೆಯುದ್ದಕ್ಕೂ ನೂರಾರು ಜನ ಸ್ಪಂದನಾ ಅವರ ಅಂತಿಮದರ್ಶನ ಪಡೆದರು.
Advertisement