ಬೆಂಗಳೂರು: ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
‘Black staurday’ ಎಂಬುದಾಗಿ ಟ್ವೀಟ್ ಮಾಡಿರುವ ಅವರು, ‘ಭಾನುವಾರ ನಸುಕಿನಲ್ಲಿ ಚಿತ್ರದುರ್ಗದಲ್ಲಿ ಐವರು ಸಾವಿಗೀಡಾಗಿದ್ದಾರೆ. ಇದರಿಂದಾಗಿ, ರಾಜ್ಯದಲ್ಲಿ 24 ಗಂಟೆಯಲ್ಲಿ 37 ಮಂದಿ ಪ್ರಾಣ ಕಳೆದುಕೊಂಡಂತಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಅಪಘಾತಗಳ ಬಗ್ಗೆ ಬೇಸರ ವ್ಯಕ್ತ ಪಡಿಸಿರುವ ಅಲೋಕ್ ಕುಮಾರ್ ಪ್ರಯಾಣಿಕರಿಗೆ ಕೆಲವೊಂದು ಸಲಹೆ ನೀಡಿದ್ದಾರೆ, ಮೃತರಲ್ಲಿ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾರು ಪ್ರಯಾಣಿಕರು ಹಾಗೂ ಪಾದಚಾರಿಗಳು ಸಹ ಮೃತಪಟ್ಟಿದ್ದಾರೆ.
ಬೈಕ್ ಸವಾರ ಹಾಗೂ ಹಿಂಬದಿ ಸವಾರ, ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಸಂಚರಿಸಬೇಕು. ಅನನುಭವಿ ಚಾಲಕರು ರಾತ್ರಿ ಚಾಲನೆಯನ್ನು ತಪ್ಪಿಸಬೇಕು ಎಂದು ಸಲಹೆ ನೀಡಿ ಟ್ವೀಟ್ ಮಾಡಿದ್ದಾರೆ.
Advertisement