ದಕ್ಷಿಣ ಕನ್ನಡ: ಅಜ್ಜಾವರ ಗ್ರಾಮದ ಶಾಲೆಯ ಊಟದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನ!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ 43 ವರ್ಷ ಹಳೆಯದಾದ ಸರಕಾರಿ ಪ್ರಾಥಮಿಕ ಶಾಲೆಗೆ 1ರಿಂದ 5ನೇ ತರಗತಿಯ ಮಕ್ಕಳು ಮಧ್ಯಾಹ್ನದ ಊಟಕ್ಕೆಂದೇ ಇರುವ ಪುಟ್ಟ ಕೊಠಡಿಯಲ್ಲಿ ತರಗತಿಗೆ ಹಾಜರಾಗುವ ಅನಿವಾರ್ಯತೆ ಎದುರಾಗಿದೆ.
ದಾಸೋಹ ಕೊಠಡಿಯಲ್ಲಿ ಪಾಠ ಕೇಳುತ್ತಿರುವ ಮಕ್ಕಳು
ದಾಸೋಹ ಕೊಠಡಿಯಲ್ಲಿ ಪಾಠ ಕೇಳುತ್ತಿರುವ ಮಕ್ಕಳು
Updated on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ 43 ವರ್ಷ ಹಳೆಯದಾದ ಸರಕಾರಿ ಪ್ರಾಥಮಿಕ ಶಾಲೆಗೆ 1ರಿಂದ 5ನೇ ತರಗತಿಯ ಮಕ್ಕಳು ಮಧ್ಯಾಹ್ನದ ಊಟಕ್ಕೆಂದೇ ಇರುವ ಪುಟ್ಟ ಕೊಠಡಿಯಲ್ಲಿ ತರಗತಿಗೆ ಹಾಜರಾಗುವ ಅನಿವಾರ್ಯತೆ ಎದುರಾಗಿದೆ.

ಆರಂಭದಲ್ಲಿ ದೊಡ್ಡೇರಿಯಲ್ಲಿನ ಶಾಲಾ ಕಟ್ಟಡದ ಮೇಲ್ಛಾವಣಿಯನ್ನು ದುರಸ್ತಿ ಮಾಡಬೇಕಾಗಿತ್ತು, ಹೀಗಾಗಿ ಅದನ್ನು ಹೇಗೋ ಸರಿಪಡಿಸಿದರು. ಕಳೆದ ವರ್ಷ ಕೊಠಡಿಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಮರದ ದಿಮ್ಮಿಗಳನ್ನು ಆಧಾರವಾಗಿಟ್ಟುಕೊಂಡು ತಾತ್ಕಾಲಿಕವಾಗಿ ಗೋಡೆಗಳು ಕುಸಿಯುವುದನ್ನು ನಿಲ್ಲಿಸಿದ್ದವು ಎಂದು ಶಾಲಾಭಿವೃದ್ಧಿ ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಸದಸ್ಯರು  ವಿವರ ನೀಡಿದ್ದಾರೆ.

ವಿದ್ಯಾರ್ಥಿಗಳನ್ನು ಹತ್ತಿರದ ಶಾಲೆಗಳಿಗೆ ಸ್ಥಳಾಂತರಿಸುವಂತೆ ಶಿಕ್ಷಣ ಇಲಾಖೆ ಶಾಲಾ ಆಡಳಿತ ಮಂಡಳಿಗೆ ಮನವಿ ಮಾಡಿತು ಆದರೆ ಎಸ್‌ಡಿಎಂಸಿ ಕೇಳಲಿಲ್ಲ, ಶಾಲೆಯನ್ನು ಶಾಶ್ವತವಾಗಿ ಮುಚ್ಚುವ ಭಯದಿಂದ, ವಿದ್ಯಾರ್ಥಿಗಳನ್ನು 100 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದ ಅಕ್ಷರ ದಾಸೋಹಕ್ಕಾಗಿ ನಿರ್ಮಿಸಿದ ಕೊಠಡಿಗೆ ಸ್ಥಳಾಂತರಿಸಲಾಯಿತು, ಅಲ್ಲಿ 12 ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯುತ್ತಿವೆ ಮತ್ತು ಇನ್ನೊಂದು ಪಾಳುಬಿದ್ದ ಕಟ್ಟಡದಲ್ಲಿ ಮಧ್ಯಾಹ್ನದ ಊಟವನ್ನು ತಯಾರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಶಾಲೆಗೆ ಅನುದಾನ ನೀಡುವಂತೆ ಹಿಂದಿನ ಬಿಜೆಪಿ ಸರ್ಕಾರಕ್ಕೆ ಹಾಗೂ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಭರವಸೆಗಳು ಇನ್ನೂ ಈಡೇರಿಲ್ಲ.

ರಾಜ್ಯ ವಿಧಾನಸಭಾ ಚುನಾವಣೆಗೆ ವಾರದ ಹಿಂದೆ ಸುಳ್ಯದ ಅಂದಿನ ಶಾಸಕ ಎಸ್.ಅಂಗಾರ ಅವರು ಶಾಲೆಯ ದುರಸ್ತಿಗೆ 7 ಲಕ್ಷ ರೂ ನೀಡಿದರು. ಆದರೆ, ಚುನಾವಣೆ ಕಾರಣ ಕಾಮಗಾರಿ ವಿಳಂಬವಾಗಿದ್ದು, ದುರಸ್ತಿ ಕಾರ್ಯ ಪೂರ್ಣಗೊಳ್ಳದ ಕಾರಣ ಹಣ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ಎಸ್‌ಡಿಎಂಸಿ ಸದಸ್ಯರೊಬ್ಬರು ತಿಳಿಸಿದರು.

ಮಕ್ಕಳು ಆರಾಮವಾಗಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣ ಆಗಾಗ್ಗೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ ಡಿ ಕೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಮಕ್ಕಳು ಸಮೀಪದ ಎಸ್‌ಸಿ/ಎಸ್‌ಟಿ ಕಾಲೋನಿಯವರಾಗಿದ್ದು, ಅಧಿಕಾರಿಗಳು ಈ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಬೇಕು ಮತ್ತು ಮಕ್ಕಳು ಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.

ಇಬ್ಬರು ಕಾಯಂ ಶಿಕ್ಷಕರಿದ್ದು, ಒಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಒಬ್ಬರೇ ಶಿಕ್ಷಕರಿಗೆ ಹೊರೆಯಾಗುತ್ತಿದ್ದು, ಮೂಲಸೌಕರ್ಯಗಳ ಕೊರತೆಯಿಂದ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com