ಆಕ್ರೋಶಕ್ಕೆ ಹೆದರಿದ ಸರ್ಕಾರ: ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ತಡೆ ಆದೇಶ ವಾಪಸ್!

ಕರ್ನಾಟಕದ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಹಿಡಿದು ಆದೇಶ ಹೊರಡಿಸಿರುವುದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಕೂಡಲೇ ಅನುದಾನಕ್ಕೆ ತಡೆ ನೀಡಿದ್ದ ಆದೇಶ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕದ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಹಿಡಿದು ಆದೇಶ ಹೊರಡಿಸಿರುವುದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಕೂಡಲೇ ಅನುದಾನಕ್ಕೆ ತಡೆ ನೀಡಿದ್ದ ಆದೇಶ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ತಡೆ ಹಿಡಿಯುವಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶಿಸಿದೆ,  2022-23ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ, ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡಬಾರದು, ಶೇ‌ 50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ತಕ್ಷಣ ಅನುದಾನ ತಡೆ ಹಿಡಿಯಬೇಕು, ಅನುದಾನದ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯಬೇಕು ಎನ್ನುವ ಮೂರು ವಿಷಯಗಳನ್ನು ಪ್ರಸ್ತಾಪಿಸಿ ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನ ಬಿಡುಗಡೆ ತಡೆಹಿಡಿಯಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ನೀಡಿತ್ತು.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ, ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್ ಪಡೆಯುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಮುಜರಾಯಿ ಇಲಾಖೆ ಆಯುಕ್ತರು ಕನ್​ಫ್ಯೂಸ್​ ಆಗಿದ್ದಾರೆ ಅಷ್ಟೇ.

ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂಬ ಯಾವ ಅನುಮಾನವೂ ಇಲ್ಲ. ಯಾವ ದೇವಸ್ಥಾನದ ಕೆಲಸವನ್ನೂ ನಿಲ್ಲಿಸುವುದಕ್ಕೆ ಹೋಗುವುದಿಲ್ಲ. ಸ್ಟೇಟಸ್ ರಿಪೋರ್ಟ್ ಕೇಳಿದ್ದಕ್ಕೆ ಕನ್​ಫ್ಯೂಸ್ ಮಾಡಿಕೊಂಡಿಕೊಂಡು ನಮ್ಮ ಇಲಾಖೆಯ ಆಯುಕ್ತರು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com