ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೇಕರಿಗೆ ನುಗ್ಗಿ ದುಷ್ಕರ್ಮಿಗಳ ದಾಂಧಲೆ: ತಂಡ ರಚಿಸಿ ಪುಂಡರ ಪತ್ತೆಗಿಳಿದ ಪೊಲೀಸರು!

ಬೇಕರಿಯೊಂದಕ್ಕೆ ನುಗ್ಗಿದ ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು, ದಾಂಧಲೆ ನಡೆಸಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಾನಗರದಲ್ಲಿ ನಡೆದಿದೆ.
Published on

ಬೆಂಗಳೂರು: ಬೇಕರಿಯೊಂದಕ್ಕೆ ನುಗ್ಗಿದ ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು, ದಾಂಧಲೆ ನಡೆಸಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಾನಗರದಲ್ಲಿ ನಡೆದಿದೆ.

ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಬೇಕರಿ ಶ್ರೀ ಮಂಜುನಾಥ ಕೇಕ್ ಕಾರ್ನರ್ & ಸ್ವೀಟ್ಸ್ ಮೇಲೆ ನಾಲ್ವರು ದುಷ್ಕರ್ಮಿಗಳ ತಂಡ ದಾಳಿ ನಡೆದಿದೆ.

ಈ ವೇಳೆ ಕಲ್ಲು, ದೊಣ್ಣೆಗಳಿಂದ ಬೇಕರಿಯ ಶೋಕೇಸ್ ಒಡೆದು ಹಾಕಿದ್ದಾರೆ. ಆಹಾರ ಪದಾರ್ಥಗಳನ್ನು ನಾಶಪಡಿಸಿದ್ದಾರೆ. ಈ ವೇಳೆ ಬೇಕರಿ ಮಾಲೀಕ ಚಂದ್ರಶೇಖರ್ ಅವರು ತಡೆಯಲು ಯತ್ನ ನಡೆಸಿದ್ದರೂ, ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ದುಷ್ಕರ್ಮಿಗಳ ದಾಳಿಯಿಂದಾಗಿ ರೂ.30,000ರಿಂದ 35,000 ನಷ್ಟವಾಗಿದ್ದು, ಈ ಸಂಬಂಧ ಮಾಲೀಕ ಚಂದ್ರಶೇಖರ್ ಅವರು ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ಬಳಿಕ ಆರೋಪಿಗಳು ತರೆಮರೆಸಿಕೊಂಡಿದ್ದು, ಇವರ ಪತ್ತೆಗಾಗಿ ತಂಡ ರಚಿಸಿರುವ ಪೊಲೀಸರು, ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com