ಎನ್‌ಇಪಿ ರದ್ದು: ಆಗಸ್ಟ್ 21ರಂದು ಶಿಕ್ಷಣ ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ

ಎನ್‌ಇಪಿ ರದ್ದುಗೊಳಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸೋಮವಾರ ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ರೂಪಿಸಲು ಸರ್ಕಾರವು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಎನ್‌ಇಪಿ ರದ್ದುಗೊಳಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸೋಮವಾರ ಸಭೆ ನಡೆಸಲಿದ್ದಾರೆ.

ಈ ವೇಳೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ರೂಪಿಸಲು ಸರ್ಕಾರವು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
ಉನ್ನತ ಶಿಕ್ಷಣ ಇಲಾಖೆಯ ಅಧಿಕೃತ ಮೂಲಗಳ ಪ್ರಕಾರ, ಎನ್‌ಇಪಿಯನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ ನಂತರ ಸರ್ಕಾರವು ಹೊಸ ರಾಜ್ಯ ಶಿಕ್ಷಣ ನೀತಿಯ ಮಾರ್ಗಸೂಚಿಗಳನ್ನು ನಿರ್ಧರಿಸಬೇಕಿದೆ.

ಎಸ್‌ಇಪಿ ಜೊತೆಗೆ, ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ಅತಿಥಿ ಅಧ್ಯಾಪಕರ ನೇಮಕಾತಿ ಮತ್ತು ಸಂಭಾವನೆ ಸೇರಿದಂತೆ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಸಾಮಾನ್ಯ ಶೈಕ್ಷಣಿಕ ಕ್ಯಾಲೆಂಡರ್ ಮತ್ತು ಕೆಲವು ಸಂಸ್ಥೆಗಳನ್ನು ಶ್ರೇಷ್ಠ ಸಂಸ್ಥೆಗಳಾಗಿ ಮೇಲ್ದರ್ಜೆಗೆ ಏರಿಸುವ ಬಗ್ಗೆಯೂ ಚರ್ಚಿಸಲಿದ್ದಾರೆ.

'ಮುಖ್ಯಮಂತ್ರಿ ಮಟ್ಟದಲ್ಲಿ ಚರ್ಚೆಯ ಅಗತ್ಯವಿರುವ ಏಕೈಕ ವಿಷಯವೆಂದರೆ ಅದು ಎಸ್‌ಇಪಿ ಆಗಿದೆ. ಇತರ ಸಮಸ್ಯೆಗಳಿಗೆ ಹಣಕಾಸಿನ ನೆರವು ಬೇಕಾಗುತ್ತದೆ' ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com