ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 1 ರಿಂದ ಹತ್ತು ದಿನ ಅವಕಾಶ

ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಮಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.

ಈ ಮೊದಲು ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ ಆಗಸ್ಟ್ 21 ಕೊನೆಯ ದಿನವಾಗಿತ್ತು. ಆದರೆ, ಸೋಮವಾರ ಸರ್ವರ್ ದೋಷದಿಂದಾಗಿ ಹಲವರು ತೊಂದರೆ ಅನುಭವಿಸಿದ ಕಾರಣ, ಸಾರ್ವಜನಿಕರು ಇನ್ನಷ್ಟು ಕಾಲಾವಕಾಶ ನೀಡುವಂತೆ

ಬೇಡಿಕೆಯಿಟ್ಟಿದ್ದರು. ಇದನ್ನು ಪರಿಗಣಿಸಿ, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಆಗಸ್ಟ್ 23ರವರೆಗೂ ಕಾಲಾವಕಾಶ ನೀಡಲಾಗಿತ್ತು. 
ಇದೀಗ, ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸ್ವೀಕರಿಸಲಾಗುವುದು ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com