ಜಯನಗರ ಶಾಸಕರ ಆಯ್ಕೆ ಅಸಿಂಧು ಕೋರಿ ಸೌಮ್ಯಾ ರೆಡ್ಡಿ ಅರ್ಜಿ: ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್

ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಶಾಸಕ ಸಿಕೆ ರಾಮಮೂರ್ತಿ ಅವರ ಆಯ್ಕೆಯನ್ನು ಪ್ರಶ್ನಿಸಿ ಕೇವಲ 16 ಮತಗಳಿಂದ ಪರಾಜಿತಗೊಂಡಿದ್ದ ಕಾಂಗ್ರೆಸ್‌ನ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ.
ಹೈಕೋರ್ಟ್
ಹೈಕೋರ್ಟ್
Updated on

ಬೆಂಗಳೂರು: ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಶಾಸಕ ಸಿಕೆ ರಾಮಮೂರ್ತಿ ಅವರ ಆಯ್ಕೆಯನ್ನು ಪ್ರಶ್ನಿಸಿ ಕೇವಲ 16 ಮತಗಳಿಂದ ಪರಾಜಿತಗೊಂಡಿದ್ದ ಕಾಂಗ್ರೆಸ್‌ನ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ.

ಮೇ 13ರಂದು ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರತಿಸ್ಪರ್ಧಿ ರಾಮಮೂರ್ತಿ ಅವರ ಆಯ್ಕೆಯನ್ನು ಪ್ರಶ್ನಿಸಿ ಸೌಮ್ಯಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ರಾಚಯ್ಯ ಅವರು ಮುಂದೂಡಿದ್ದಾರೆ.

ಆಗಸ್ಟ್ 1ರಂದು ನ್ಯಾಯಾಲಯ ರಾಮಮೂರ್ತಿ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಮತ ಎಣಿಕೆಯಲ್ಲಿನ ಕಾರ್ಯವಿಧಾನದ ಲೋಪವನ್ನು ಎತ್ತಿ ತೋರಿಸಿರುವ ಅರ್ಜಿದಾರರು, ಮತದಾನಕ್ಕೆ ಗೈರುಹಾಜರಾಗಿದ್ದ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಸೇರಿದಂತೆ 540 ಮತಗಳು ಚಲಾವಣೆಯಾಗಿವೆ ಎಂದು ಹೇಳಿದರು. ಆದರೆ, ಚುನಾವಣಾ ನಿಯಮಾವಳಿಯ ನಿಯಮ 27ಸಿ ಅಡಿಯಲ್ಲಿ ನಿರ್ದಿಷ್ಟ ಅವಧಿಯೊಳಗೆ ಸ್ವೀಕರಿಸಿದ, ತಿರಸ್ಕರಿಸಿದ ಮತ್ತು ಸ್ವೀಕರಿಸಿದ ಮತದಾರರ ಸಂಖ್ಯೆಯನ್ನು ಚುನಾವಣಾಧಿಕಾರಿ ಬಹಿರಂಗಪಡಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಆದ್ದರಿಂದ, ಇದು ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಮತ್ತು ಇದು ರಾಮಮೂರ್ತಿ ಅವರ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿದ ಅರ್ಜಿದಾರರು, ಅಂಚೆ ಮತ ಎಣಿಕೆಯಲ್ಲಿನ ಇತರ ಲೋಪಗಳನ್ನು ಎತ್ತಿ ತೋರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com