ರಾಮನಗರ: KSRTC ಬಸ್ ಕಾರಿನ ನಡುವೆ ಡಿಕ್ಕಿ: ಕಾರಿನಲ್ಲಿದ್ದ ಆರು ಮಂದಿ ದುರ್ಮರಣ

ಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ. 
ಅಪಘಾತದ ದೃಶ್ಯ
ಅಪಘಾತದ ದೃಶ್ಯ

ಕನಕಪುರ: ಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ. 

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ಅಪಘಾತ ಸಂಭವಿಸಿದ್ದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಕೆಎ01ಎಂಎಫ್ 8055 ಸಂಖ್ಯೆಯ ಟೊಯೊಟೊ ಕ್ವಾಲಿಸ್ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇನ್ನು ಅಪಘಾತದ ವೇಳೆ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಕ್ರೇನ್ ಮೂಲಕ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ.

ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com