ಮೈಸೂರು: ಆಸ್ತಿ ವಿಚಾರಕ್ಕೆ ಅಣ್ಣ-ಅತ್ತಿಗೆಯನ್ನು ಬರ್ಬರವಾಗಿ ಕೊಂದ ತಮ್ಮ!

ಆಸ್ತಿ ವಿಚಾರಕ್ಕೆ ಅಣ್ಣ ಮತ್ತು ಅತ್ತಿಗೆಯನ್ನು ತಮ್ಮನೇ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಆಸ್ತಿ ವಿಚಾರಕ್ಕೆ ಅಣ್ಣ ಮತ್ತು ಅತ್ತಿಗೆಯನ್ನು ತಮ್ಮನೇ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ತಿ.ನರಸೀಪುರ ತಾಲೂಕಿನ ನುಗ್ಗಳ್ಳಿ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತರನ್ನು 55 ವರ್ಷದ ಶಿವಲಿಂಗೇಗೌಡ ಮತ್ತು 47 ವರ್ಷದ ಭಾರತಿ ಎಂದು ತಿಳಿದುಬಂದಿದೆ.

50 ವರ್ಷದ ಹನುಮಂತೇಗೌಡ ಕೊಲೆ ಆರೋಪಿಯಾಗಿದ್ದು ಆಸ್ತಿ ವಿಚಾರಕ್ಕೆ ಪದೇ ಪದೇ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಜಮೀನಿನಲ್ಲಿ ಶಿವಲಿಂಗೇಗೌಡ ಮತ್ತು ಪತ್ನಿ ಭಾರತಿ ಕೆಲಸ ಮಾಡುತ್ತಿದ್ದು ಈ ವೇಳೆ ಅಲ್ಲಿಗೆ ಬಂದ ಹನುಮಂತೇಗೌಡ ಶಿವಲಿಂಗೇಗೌಡ, ಅತ್ತಿಗೆ ಭಾರತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. 

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com