ಲಂಚ ಸ್ವೀಕರಿಸುವಾಗ ಆಳಂದ ತಹಶೀಲ್ದಾರ್, ಆರ್ ಐ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ

ಕಲಬುರಗಿ ಜಿಲ್ಲೆಯ ಆಳಂದ ತಹಶೀಲ್ದಾರ್​ ಯಲ್ಲಪ್ಪ ಸುಬೇದಾರ್ ಮತ್ತು ರೆವಿನ್ಯೂ ಇನ್ಸ್​ಪೆಕ್ಟರ್​ ರಾಜಶೇಖರ್ ಅವರು ಗುರುವಾರ ಲಂಚ ಸ್ವೀಕರಿಸುವಾಗ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಆಳಂದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್
ಆಳಂದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್
Updated on

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಹಶೀಲ್ದಾರ್​ ಯಲ್ಲಪ್ಪ ಸುಬೇದಾರ್ ಮತ್ತು ರೆವಿನ್ಯೂ ಇನ್ಸ್​ಪೆಕ್ಟರ್​ ರಾಜಶೇಖರ್ ಅವರು ಗುರುವಾರ ಲಂಚ ಸ್ವೀಕರಿಸುವಾಗ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಇಂದು ಆಳಂದ ತಾಲೂಕು ಕಚೇರಿಯಲ್ಲೇ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಮತ್ತು ಆರ್​ಐ ರಾಜಶೇಖರ್​ ಅವರು ಜಮೀನಿಗೆ ಕೃಷಿಯೇತರ ಪ್ರಮಾಣಪತ್ರ ನೀಡಲು ಮೆಹಬೂಬ್ ಪಟೇಲ್​​ ಎನ್ನುವವರಿಂದ 12,000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ಮಹೆಬೂಬ್ ಪಟೇಲ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದು, ಇಂದು 12 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್​ಪಿ ಕರ್ನೂಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐಗಳಾದ ನಾನಾಗೌಡ, ದ್ರುವತಾರೆ, ಅಕ್ಕಮಹಾದೇವಿ ಅವರು ದಾಳಿ ನಡೆಸಿ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ಆರ್‌ಐ ರಾಜಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com