8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವು: ಒಂಟಿಸಲಗದ ಜೊತೆ ಕಾದಾಡಿ ಪ್ರಾಣಬಿಟ್ಟ ಆನೆ!

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ.
ಸಾವಿಗೀಡಾದ ಅರ್ಜುನ
ಸಾವಿಗೀಡಾದ ಅರ್ಜುನ
Updated on

ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

22 ವರ್ಷಗಳ ಕಾಲ ದಸರಾದಲ್ಲಿ ಭಾಗವಹಿಸಿದ್ದ ಸಾಕಾನೆ ಅರ್ಜುನ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ. ಜಂಬೂಸವಾರಿಯಲ್ಲಿ ನಿಶಾನೆ ಆನೆಯಾಗಿ ಅರ್ಜುನ ಭಾಗಿಯಾಗಿದ್ದ. ಅರ್ಜುನ ಆನೆಗೆ 65 ವರ್ಷ ವಯಸ್ಸಾಗಿತ್ತು. 288ಮೀ ಎತ್ತರ, 5800 ರಿಂದ 6000 ಕೆ.ಜಿ. ತೂಕ ಇರುವುದು ಇತ್ತೀಚೆಗೆ ದಸರಾದಲ್ಲಿ ಭಾಗವಹಿಸಿದ್ದ ಸಂದರ್ಭ ಗೊತ್ತಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com