ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಚಂದಾಪುರ ಪುರಸಭೆಯಿಂದ ಕಡತ ಕದ್ದೊಯ್ದ ಪ್ರಕರಣ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಕಡತಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಕಡತಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಆರೋಗ್ಯಧಿಕಾರಿ ರಮೇಶ್ ರಾಜ್ ಮತ್ತು ಕಿರಿಯ ಅಧಿಕಾರಿ ಅಮೃತಳನ್ನು ಅಮಾನತು ಮಾಡಲಾಗಿದೆ. ಚಂದಾಪುರ ಪುರಸಭೆಯಲ್ಲಿ ಕಡತದ ಪುಸ್ತಕಗಳನ್ನು ಕದ್ದು ತೆಗೆದುಕೊಂಡು ಹೋಗುವಾಗ ಸಿಕ್ಕಿಬಿದ್ದಿದ್ದರು. 

ಚಂದಾಪುರ ಪುರಸಭೆಯಲ್ಲಿ ನಡೆದಿದ್ದ ಅಕ್ರಮವನ್ನು ಪುರಸಭೆ ಸದಸ್ಯರು ಬಯಲು ಮಾಡಿದ್ದರು. ಪುರಸಭೆಯ ಮುಂಭಾಗದಲ್ಲಿಯೇ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಅಡ್ಡಗಟ್ಟಿ ಹಿಡಿದು ಕಡತಗಳನ್ನು ಸೂರ್ಯನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿತ್ತು.

Related Stories

No stories found.

Advertisement

X
Kannada Prabha
www.kannadaprabha.com