ಬೆಂಗಳೂರು: ಮಂಗಳವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಂಗಳೂರಿನ ಮೂರು ಕಡೆ ಸೇರಿ ರಾಜ್ಯದ 63ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿ ಶೋಧ ಕಾರ್ಯಾಚರಣೆ ಕೈಗೊಂಡಿದೆ.
ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಮೂರು ಕಡೆ, ಕಲಬುರಗಿ, ಬೀದರ್ ನಲ್ಲಿ ತಲಾ 2 ಕಡೆ ಹಾಗೂ ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿಗಳ ಇಂತಿದೆ...
ಚಿನ್ನ, ವಜ್ರ, ನಗದು ಪತ್ತೆ
ಜಕ್ಕೂರಿನಲ್ಲಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಡಿ.ಚನ್ನಕೇಶವ ಅವರ ಮನೆಯಲ್ಲಿ ಶೋಧ ನಡೆಸಿದಾಗ 6 ಲಕ್ಷ ರೂಪಾಯಿ ನಗದು, ಅಂದಾಜು 3 ಕೆಜಿ ತೂಕದ ಚಿನ್ನ, 6 ಲಕ್ಷ ನಗದು, 28 ಕೆಜಿ ಬೆಳ್ಳಿ, 25 ಲಕ್ಷ ಮೌಲ್ಯದ ವಜ್ರ, 5 ಲಕ್ಷ ಮೌಲ್ಯದ ಪುರಾತನ ವಸ್ತುಗಳು ಪತ್ತೆಯಾಗಿವೆ. ಇವುಗಳ ಅಂದಾಜು 1.5 ಕೋಟಿ ರೂಪಾಯಿ ಆಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಸಹಕಾರ ನಗರದಲ್ಲಿರುವ ಚನ್ನಕೇಶವನ ಸೋದರ ಮಾವ ತರುಣ್ ಅವರ ಮನೆಯಲ್ಲಿ ಹೆಚ್ಚಿನ ದಾಳಿ ನಡೆಸಿದ ಅಧಿಕಾರಿಗಳು, 500 ಮುಖಬೆಲೆಯ 92,95,460 ರೂ ನಗದು ಮತ್ತು 55 ಗ್ರಾಂ ಚಿನ್ನವನ್ನು ಪತ್ತೆಹಚ್ಚಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
Advertisement