ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಆರೋಪಿ ಪ್ರವೀಣ್ ಚೌಗಲೆ ನ್ಯಾಯಾಂಗ ಬಂಧನ ವಿಸ್ತರಣೆ

ನೆಜ್ಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನವನ್ನು ಮಂಗಳವಾರ 14 ದಿನಗಳವರೆಗೆ ವಿಸ್ತರಿಸಲಾಗಿದೆ.
ಉಡುಪಿ ಕೊಲೆ ಪ್ರಕರಣ ಆರೋಪಿ ಪ್ರವೀಣ್ ಚೌಗಲೆ
ಉಡುಪಿ ಕೊಲೆ ಪ್ರಕರಣ ಆರೋಪಿ ಪ್ರವೀಣ್ ಚೌಗಲೆ

ಉಡುಪಿ: ನೆಜ್ಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನವನ್ನು ಮಂಗಳವಾರ 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚೌಗಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದರು.
ನ್ಯಾಯಾಲಯ ಆತನ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಿದೆ.

ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರು ಐನಾಜ್, ಆಕೆಯ ಸಹೋದರಿ ಅಫ್ನಾನ್, ಸಹೋದರ ಅಸೀಮ್ ಮತ್ತು ಅವರ ತಾಯಿ ಹಸೀನಾ ಹತ್ಯೆಗೀಡಾಗಿದ್ದರು. ಐನಾಜ್ ಅಜ್ಜಿ ಹಾಜಿನಬ್ಬ ನೆಜ್ಜಾರಿನಲ್ಲಿರುವ ಅವರ ಮನೆಯಲ್ಲಿ ಗಾಯಗೊಂಡಿದ್ದರು. 

ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದಕ್ಕಾಗಿ ನವೆಂಬರ್ 14 ರಂದು ಪೊಲೀಸರು ಪ್ರವೀಣ್ ಚೌಗಲೆಯನ್ನು ಬೆಳಗಾವಿಯಲ್ಲಿ ಬಂಧಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com